ಆರ್ ಬಿಐ ಕೇಂದ್ರೀಯ ಮಂಡಳಿ ನಿರ್ದೇಶಕರಾಗಿ ಗುರುಮೂರ್ತಿ, ಸತೀಶ್ ಮರಾಠೆ ನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ ನ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ಅವರುಗಳ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ
ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ
Updated on
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ಅವರುಗಳ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಗುರುಮೂರ್ತಿ ತಮಿಳು ನಿಯತಕಾಲಿಕೆ ’ತುಗಲಕ್’ ನ ಸಂಪಾದಕರು ಮಾತ್ರವಲ್ಲದೆ ಚಾರ್ಟರ್ಡ್ ಅಕೌಂಟೆಂಟ್, ಆರ್ಥಿಕ ಮತ್ತು ರಾಜಕೀಯ ಅಂಕಣಕಾರರೂ ಆಗಿದ್ದಾರೆ. 
ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಈ ನೇಮಕಾತಿಗಳ ಪ್ರಸ್ತಾವನೆ ಬಂದಿತ್ತು ಎಂದು ನೋಟೀಸಿನಲ್ಲಿ ಹೇಳಲಾಗಿದೆ.
15 ಸದಸ್ಯರನ್ನು ಒಳಗೊಂಡಿರುವ  ಕೇಂದ್ರ ಬ್ಯಾಂಕ್ ನ ಉನ್ನತ ನಿರ್ದೇಶಕರ ಮಂಡಳಿಗೆ ಇದೀಗ ಇಬ್ಬರು ಹೊಸ ನಿರ್ದೇಶಕರು ನೇಮಕವಾಗಿದ್ದು ನೇಮಕಾತಿ ಆದೇಶದ ದಿನಾಂಕದಿಂದ ನಾಲ್ಕು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com