ಕೇಂದ್ರ ಸರ್ಕಾರ ಮತ್ತು ಆರ್ ಬಿಐ ತಿಕ್ಕಾಟದಿಂದಾಗಿ ಬೇಸತ್ತು ನಿನ್ನೆಯಷ್ಟೇ ಆರ್ ಬಿಐ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ಅವರು ರಾಜಿನಾಮೆ ನೀಡಿದ್ದರು. ಊರ್ಜಿತ್ ಪಟೇಲ್ ವೈಯುಕ್ತಿಕ ಕಾರಣ ನೀಡಿ ರಾಜಿನಾಮೆ ನೀಡಿದ್ದರೂ ಅವರ ರಾಜಿನಾಮೆ ಹಿಂದೆ ಕೇಂದ್ರ ಸರ್ಕಾರದ ಪಾತ್ರದ ಕುರಿತು ಊಹಾಪೋಹಗಳು ಕೇಳಿಬರುತ್ತಿವೆ.