ಹೆಚ್ಚು ಮುಷ್ಕರ ನಡೆಸುವ ಮೂಲಕ ಸರ್ಕಾರದ ವಿರುದ್ಧ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಅಲ್ಲದೆ ಸೌಹಾರ್ದ ಪರಿಹಾರದ ಅಗತ್ಯವನ್ನು ಪರಿಗಣಿಸಿ ಸರ್ಕಾರ ಮತ್ತು ಬ್ಯಾಂಕುಗಳ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಭೆಯ ನಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಹೇಳಿದ್ದಾರೆ.