ದೆಹಲಿ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬ್ಯಾಂಕುಗಳ ಒಕ್ಕೂಟ ವೇದಿಕೆ ದೇಶಾದ್ಯಂತ ಕರೆ ನೀಡಿರುವ ಎರಡು ದಿನಗಳ ರಾಷ್ಟ್ರೀಕೃತ ಬ್ಯಾಂಕುಗಳ ಮುಷ್ಕರದಿಂದಾಗಿ ಸುಮಾರು 20 ಸಾವಿರ ಕೋಟಿ ರೂಪಾಯಿ ಮೊತ್ತದ ಗ್ರಾಹಕರ ವಹಿವಾಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಸೊಚಾಮ್ ಹೇಳಿದೆ.
ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಪುನಶ್ಚೇತನಕ್ಕೆ ಸೂಕ್ತ ಯೋಜನೆ ರೂಪಿಸುವಂತೆ ಅಸೊಚಾಮ್ ಸರ್ಕಾರವನ್ನು ಆಗ್ರಹಿಸಿದೆ.
Advertisement