ಸಾರ್ವಜನಿಕ ವಾಲಯ(ಪಿಎಸ್ ಯು)ದ ಬ್ಯಾಂಕ್ ಗಳ ವಾರ್ಷಿಕ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೇಟ್ಲಿ, ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಗೆ ಎನ್ ಪಿಎ ದೊಡ್ಡ ಸವಾಲಾಗಿದೆ. ಆದರೆ ದಿವಾಳಿತನ ಮತ್ತು ದಿವಾಳಿತನ ಸಂಹಿತೆ (ಐಬಿಸಿ)ಜಾರಿಗೊಳಿಸಿದ ನಂತರ, ಸಾಲ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳನ್ನು ಹರಾಜು ಹಾಕುವ ಮೂಲಕ ಸಾಲ ಮರುಪಡೆಯುವ ಪ್ರಮಾಣ ಹೆಚ್ಚಾಗಿದೆ ಎಂದರು.