ಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ 

ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ; ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ. 


ಅಖಿಲ ಭಾರತ ಬ್ಯಾಂಕು ಉದ್ಯೋಗಿಗಳ ಸಂಘ ಮತ್ತು ಭಾರತೀಯ ಬ್ಯಾಂಕು ಉದ್ಯೋಗಿಗಳ ಫೆಡರೇಶನ್ (ಬಿಇಎಫ್ಐ), ಭಾರತೀಯ ಬ್ಯಾಂಕು ಅಸೋಸಿಯೇಷನ್ ಗೆ ಮಾಹಿತಿ ನೀಡಿ ಅಕ್ಟೋಬರ್ 22ರಂದು ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಷ್ಕರ ನಡೆಸುವುದಾಗಿ ಹೇಳಿದೆ.


ಮುಷ್ಕರದಲ್ಲಿ ನಿರತವಾಗುವ ಸಂಘಟನೆಗಳಿಗೆ ತಮ್ಮ ಬ್ಯಾಂಕಿನ ಬಹುತೇಕ ನೌಕರರು ಸದಸ್ಯರಾಗಿಲ್ಲದಿರುವುದರಿಂದ ಇದರ ಪರಿಣಾಮ ಕಡಿಮೆಯಿರಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಸಿಂಡಿಕೇಟ್ ಬ್ಯಾಂಕುಗಳು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com