ಇದರಿಂದ ಮಾರುಕಟ್ಟೆಯಲ್ಲಿನ ನಿಯಂತ್ರಣ ವಲಯಕ್ಕೆ ನಿರಾಳತೆ ಸಿಕ್ಕಂತಾಗಿದೆ. ಆರ್ ಬಿಐ ಸುತ್ತೋಲೆ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಕೈಗಾರಿಕೆ, ವಿದ್ಯುತ್, ರಸಗೊಬ್ಬರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ರೊಹಿಂಟನ್ ಫಾಲಿ ನಾರಿಮನ್ ಅವರನ್ನೊಳಗೊಂಡ ನ್ಯಾಯಪೀಠ, ಆರ್ ಬಿಐಯ ಸುತ್ತೋಲೆ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಘೋಷಿಸಿದ್ದಾರೆ. ಆರ್ ಬಿಐಯ ಸುತ್ತೋಲೆಯನ್ನು ಪ್ರಶ್ನಿಸಿ ಕಳೆದ ವರ್ಷ ಫೆಬ್ರವರಿ 12ರಂದು ಈ ವಲಯಗಳ ಮುಖ್ಯಸ್ಥರು ಕೋರ್ಟ್ ಮೊರೆ ಹೋಗಿದ್ದರು.