ಏರ್ ಇಂಡಿಯಾ ಖಾಸಗೀಕರಣಕ್ಕೆ ಸರ್ಕಾರ ಬದ್ದ: ನಾಗರಿಕ ವಿಮಾನಯಾನ ಸಚಿವರಿಂದ ಮಹತ್ವದ ಘೋಷಣೆ

ಏರ್ ಇಂಡಿಯಾದ ಸಂಪೂರ್ಣ ಖಾಸಗೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಏರ್ ಇಂಡಿಯಾದ ಸಂಪೂರ್ಣ ಖಾಸಗೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.

ನಾಗರಿಕ ವಿಮಾನಯಾನ ವರದಿಗಾರರ ಕಾರ್ಯಾಗಾರದಲ್ಲಿ ಅವರು ಮಾತನಾಡಿ, “ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸಂಕಲ್ಪವನ್ನು ಸರ್ಕಾರ ಮಾಡಿದೆ ನಾವು ಲಭ್ಯವಿರುವ ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಉತ್ತಮವಾದ ವ್ಯವಹಾರವನ್ನು ಪಡೆಯಬೇಕು. ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳಲು ಹಲವರು ತುಂಬಾ ಆಸಕ್ತಿ ಹೊಂದಿದ್ದಾರೆ' ಎಂದ ಅವರು "ಏರ್ ಇಂಡಿಯಾವನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಾರೋ ಅವರು ತುಂಬಾ ಅದೃಷ್ಟಶಾಲಿಯಾಗುತ್ತಾರೆ ಮತ್ತು ಬಲವಾದ ಖಾಸಗಿ ವಲಯದ ತತ್ವಗಳ ಪ್ರಕಾರ ಅದನ್ನು ಮುನ್ನಡೆಸಲು ಸಾಧ್ಯವಾಗುತ್ತದೆ" ಎಂದು ಹೇಳಿದರು.

ಈ ಹಿಂದೆ ಜುಲೈ 11 ರಂದು ಸಚಿವರು ಲೋಕಸಭೆಗೆ ರಾಷ್ಟ್ರೀಯ ವಾಹಕ ಏರ್ ಇಂಡಿಯಾದ ಆಯಕಟ್ಟಿನ ಹೂಡಿಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com