ಪ್ರಶ್ನೋತ್ತರ ಅವಧಿಯಲ್ಲಿ, ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಸಾಲಗಾರರೊಂದಿಗೆ ಬ್ಯಾಂಕುಗಳು ದುರ್ವತನೆ ತೋರುವುದನ್ನು ತಡೆಯಲು, ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಲಗಾರರೊಂದಿಗೆ ಬ್ಯಾಂಕುಗಳು ನ್ಯಾಯಯುತವಾಗಿ ವರ್ತಿಸಬೇಕು ಎಂಬುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ ಎಂದು ಸಚಿವರು ಉತ್ತರಿಸಿದರು.