ಪುದುಚೇರಿ: ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಜಿಎಸ್ಟಿ ಮಂಡಳಿ ಸಭೆಗೆ ಆಸ್ಪ್ರತ್ರೆಯಲ್ಲಿ ಮಲಗಿಯೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿರುವುದು ವಿಶೇಷವಾಗಿದೆ.
ರಾಯಣಸಾಮಿ ಅವರ ಕಾಲಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.
ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಅಧ್ಯಕ್ಷತೆಯಲ್ಲಿ ಜಿ ಎಸ್ ಟಿ ಮಂಡಳಿ ಸಭೆ ನಡೆದಿದ್ದು ಈ ಸಭೆಯಲ್ಲಿ ಮಧ್ಯಪ್ರದೇಶ, ಛತ್ತೀಸ್ಗಢ, ದೆಹಲಿ, ಪಂಜಾಬ್ ಮತ್ತು ರಾಜಸ್ತಾನದ ಹಣಕಾಸು ಸಚಿವರು ಭಾಗವಹಿಸಿದ್ದರು.
Advertisement