ಅನಾಮಿಕ ಪತ್ರ; ಸ್ವತಂತ್ರ ತನಿಖೆಗೆ ನಂದನ್ ನಿಲೇಕಣಿ ತೀರ್ಮಾನ

ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 
ನಂದನ್ ನೀಲೇಕಣಿ
ನಂದನ್ ನೀಲೇಕಣಿ

ಬೆಂಗಳೂರು: ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 
  
ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ಕಂಪನಿ, ಬಿಎಸ್ ಇ ಲಿ.ಗೆ ಬರೆದಿರುವ ಪತ್ರದಲ್ಲಿ ಇನ್ಫೋಸಿಸ್, ಆಡಳಿತ ಮಂಡಳಿ ಸದಸ್ಯರೊಬ್ಬರಿಗೆ ಕಳೆದ ಸಪ್ಟೆಂಬರ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದು, ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅದನ್ನು ವಸ್ತುನಿಷ್ಠವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದೆ. 
  
ಅನಾಮಿಕ ಪತ್ರದಲ್ಲಿ ಕಂಪನಿಯ ಸಿಇಒ ಅಮೆರಿಕ ಮತ್ತು ಮುಂಬೈಗೆ ಕೈಗೊಂಡ ಅಂತಾರಾಷ್ಟ್ರೀಯ ಪ್ರಯಾಣದಲ್ಲಿ ಅವ್ಯವಹಾರ ನಡೆದಿರುವ ಕುರಿತು ದೂರುಗಳಿಗೆ. ಈ ಸಂಬಂಧ ಸಿಇಒ ಹಾಗೂ ಸಿಎಫ್ ಒ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶಿಸಲಾಗುವುದು ಎಂದು ಕಂಪನಿ ಭರವಸೆ ನೀಡಿದೆ. 
 

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಫಲಿತಾಂಶವನ್ನು ಆಧರಿಸಿ ಲೆಕ್ಕಪತ್ರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂಪನಿ ತಿಳಿಸಿದೆ. 
 
ಬಿಎಸ್ ಇ, ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ವಿನಿಮಯ ಮಾರುಕಟ್ಟೆಗಳಿಗೆ ಕಂಪನಿಯ ಅಧ್ಯಕ್ಷ ನಂದನ್ ನೀಲೇಕಣಿ ಹೆಸರಿನಲ್ಲಿ ಪತ್ರ ಬರೆಯಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com