ಮತ್ತೆ ಆರ್ ಬಿಐ ಲಾಭಾಂಶಕ್ಕೆ ಕೈ ಹಾಕಿದ ಕೇಂದ್ರ ಸರ್ಕಾರ!

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಹಣ ಪಡೆದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಮ್ಮೆ ಆರ್ ಬಿಐ ಲಾಭಾಂಶಕ್ಕೆ ಕೈ ಹಾಕಲು ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕಿನಿಂದ ಹಣ ಪಡೆದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಮ್ಮೆ ಆರ್ ಬಿಐ ಲಾಭಾಂಶಕ್ಕೆ ಕೈ ಹಾಕಲು ಮುಂದಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಆಂಗ್ಲ ದೈನಿಕವೊಂದು ವರದಿ ಮಾಡಿದ್ದು, ಹಣಕಾಸಿನ ಕೊರತೆ ನೀಗಿಸಲು ಕೇಂದ್ರ ವಿತ್ತ ಸಚಿವಾಲಯ ಆರ್ ಬಿಐ ನಿಂದ ಸುಮಾರು 30 ಸಾವಿರ ಕೋಟಿ ರೂಗಳನ್ನು ಪಡೆಯಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. 2019-20ನೇ ಸಾಲಿನ ಜಿಡಿಪಿಯ ಶೇಕಡಾ 3.3 ರ ಹಣಕಾಸಿನ ಕೊರತೆಯ ಗುರಿಯನ್ನು ಪೂರೈಸಲು ಕೇಂದ್ರ ಸರ್ಕಾರವು ಹಣಕಾಸು ವರ್ಷದ ಅಂತ್ಯದ ವೇಳೆಗೆ ಆರ್‌ಬಿಐನಿಂದ ಸುಮಾರು 30,000 ಕೋಟಿ ರೂ.ಗಳ ಮಧ್ಯಂತರ ಲಾಭಾಂಶವನ್ನು ಪಡೆಯಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಈ ವಿಚಾರವಾಗಿ ಮಾಹಿತಿ ನೀಡಿರುವ ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು, 'ಆದಾಯ ಸಂಗ್ರಹಣೆಯಲ್ಲಿನ ಕುಸಿತ ಮತ್ತು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಆರು ವರ್ಷಗಳ ಕನಿಷ್ಠ ಶೇಕಡಾ 5 ರಿಂದ ಬೆಳವಣಿಗೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಕಾರಣದಿಂದಾಗಿ ಸರ್ಕಾರದ ಹಣಕಾಸು ಒತ್ತಡಕ್ಕೆ ಒಳಗಾಗಿದೆ. 'ಅಗತ್ಯವಿದ್ದರೆ, ಪ್ರಸಕ್ತ ಹಣಕಾಸು ವರ್ಷದಲ್ಲಿ 25,000-30,000 ಕೋಟಿ ರೂ.ಗಳ ಮಧ್ಯಂತರ ಲಾಭಾಂಶಕ್ಕಾಗಿ ಕೇಂದ್ರ ಸರ್ಕಾರ ರಿಸರ್ವ್ ಬ್ಯಾಂಕ್ ಗೆ ಮನವಿ ಮಾಡಬಹುದು. ಈ ಕುರಿತಂತೆ ಜನವರಿ ಆರಂಭದಲ್ಲಿ ಮೌಲ್ಯಮಾಪನ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ತಿಂಗಳು ಗವರ್ನರ್ ಶಕ್ತಿ ದಾಸ್ ನೇತೃತ್ವದ ಆರ್‌ಬಿಐ ಕೇಂದ್ರ ಮಂಡಳಿಯು ಸರ್ಕಾರಕ್ಕೆ 1,76,051 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲು ಅನುಮತಿ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com