4ನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಸಕಾರಾತ್ಮಕವಾಗಿರಲಿದೆ: ನೀತಿ ಆಯೋಗದ ಉಪಾಧ್ಯಕ್ಷ

ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.
ರಾಜೀವ್ ಕುಮಾರ್
ರಾಜೀವ್ ಕುಮಾರ್
Updated on

ನವದೆಹಲಿ: ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರದ ಹೊಸ ಕೃಷಿ ಸುಧಾರಣಾ ಕಾನೂನುಗಳು ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಆದರೆ ತಪ್ಪು ತಿಳುವಳಿಕೆ ಮತ್ತು ತಪ್ಪು ಸಂವಹನದ ಪರಿಣಾಮ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಕುಮಾರ್ ಅವರು ತಿಳಿಸಿದ್ದಾರೆ.

ಎರಡನೇ ತ್ರೈಮಾಸಿಕದ ಜಿಡಿಪಿ ಅಂಕಿ(ಶೇಕಡಾ 7.5 ರಷ್ಟು ಬೆಳವಣಿಗೆ) ಅಂಶವನ್ನು ಗಮನಿಸಿದರೆ ಈ ಸಾಂಕ್ರಾಮಿಕ-ಪ್ರೇರಿತ ಆರ್ಥಿಕ ಸಂಕಷ್ಟದಿಂದ ದೇಶ ಹೊರಬರುತ್ತಿದೆ ಎಂಬುದನ್ನು ತೋರಿಸುತ್ತದೆ. ಮೂರನೇ ತ್ರೈಮಾಸಿಕದಲ್ಲಿ ನಾವು ವರ್ಷದ ಹಿಂದಿನ ಆರ್ಥಿಕ ಚಟುವಟಿಕೆಯನ್ನು ಸಾಧಿಸುತ್ತೇವೆ ಎಂಬುದು ತಮ್ಮ ನಿರೀಕ್ಷೆ ಎಂದಿದ್ದಾರೆ.

ಕೋವಿಡ್ ಸಾಂಕ್ರಾಮಿಕವು ಆರ್ಥಿಕ ಚಟುವಟಿಕೆಗಳ ಮೇಲೆ ಅಭೂತಪೂರ್ವ ಪರಿಣಾಮ ಬೀರಿದೆ. ಆದರೆ ಇದು ಸಂಪೂರ್ಣವಾಗಿ ನೈಸರ್ಗಿಕ ವಿಪತ್ತಿನ ಸ್ವರೂಪದಲ್ಲಿದೆ ಮತ್ತು ಸಾಮಾನ್ಯ ಆರ್ಥಿಕ ಚಕ್ರಕ್ಕೆ ಸಂಬಂಧಿಸಿದ್ದಲ್ಲ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com