ಸಂಧಾನ ಸಭೆ ವಿಫಲ: ಜ. 31 ರಿಂದ ಎರಡು ದಿನ ಅಖಿಲ ಭಾರತ ಬ್ಯಾಂಕ್ ಮುಷ್ಕರ

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದರಾಬಾದ್/ನವದೆಹಲಿ: ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಇಂದು ಕೇಂದ್ರ ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರ ದೆಹಲಿಯ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯದಿರುವುದರಿಂದ ಸಭೆ ವಿಫಲವಾಗಿದೆ. 

ಸಭೆಯಲ್ಲಿ ಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. 

ಯುಎಫ್ ಬಿಯು ಕಡೆಯಿಂದ ಬ್ಯಾಂಕ್ ನೌಕರರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ(ಎಐಬಿಇಎ)ದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಯುಎನ್ಐಗೆ ತಿಳಿಸಿದ್ದಾರೆ.
  
ಶೇ. 20ರಷ್ಟು ಏರಿಕೆಯೊಂದಿಗೆ ವೇತನ ಪರಿಷ್ಕರಣೆ ಇತ್ಯರ್ಥ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರೆ ನೀಡಲಾಗಿರುವ  ಎರಡು ದಿನಗಳ ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.  
  
ಮುಷ್ಕರದಲ್ಲಿ ಎಐಬಿಇಎ, ಎಐಬಿಒಸಿ, ಎನ್‌ಸಿಬಿಇ, ಎಐಬಿಒಎ, ಬಿಎಫ್‌ಐ, ಐಎನ್‌ಬಿಇಎಫ್, ಐಎನ್‌ಬಿಒಸಿ, ಎನ್‌ಒಬಿಡಬ್ಲ್ಯೂ ಮತ್ತು ಎನ್ ಒಬಿಒ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳು ಪಾಲ್ಗೊಳ್ಳಲಿವೆ. 
  
ಮುಂದಿನ ಮಾರ್ಚ್ 11 ರಿಂದ ದೇಶಾದ್ಯಂತ ಮೂರು ದಿನಗಳ ಮುಷ್ಕರ ಮತ್ತು ಬರುವ ಏಪ್ರಿಲ್ 1 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಯುಎಫ್‌ಬಿಯು ತೀರ್ಮಾನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com