ಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತ: ಆರ್‌ಬಿಐ ನೇಮಿತ ಆಡಳಿತಾಧಿಕಾರಿ

ಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತವಾಗಿದೆ. ಆರ್‌ಬಿಐ ನಿಗದಿಪಡಿಸಿದ ಗಡುವಿನೊಳಗೆ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಆರ್‌ಬಿಐ ನೇಮಕ ಮಾಡಿರುವ ಲಕ್ಷ್ಮಿ ವಿಲಾಸ್ ಬ್ಯಾಂಕಿನ ಆಡಳಿತಾಧಿಕಾರಿ ಟಿ ಎನ್ ಮನೋಹರನ್ ಹೇಳಿದ್ದಾರೆ.
ಲಕ್ಷ್ಮಿ ವಿಲಾಸ್ ಬ್ಯಾಂಕ್
ಲಕ್ಷ್ಮಿ ವಿಲಾಸ್ ಬ್ಯಾಂಕ್
Updated on

ಮುಂಬೈ: ಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತವಾಗಿದೆ. ಆರ್‌ಬಿಐ ನಿಗದಿಪಡಿಸಿದ ಗಡುವಿನೊಳಗೆ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಆರ್‌ಬಿಐ ನೇಮಕ ಮಾಡಿರುವ ಲಕ್ಷ್ಮಿ ವಿಲಾಸ್ ಬ್ಯಾಂಕಿನ ಆಡಳಿತಾಧಿಕಾರಿ ಟಿ ಎನ್ ಮನೋಹರನ್ ಹೇಳಿದ್ದಾರೆ. 

ಕೆನರಾ ಬ್ಯಾಂಕ್‌ನ ಮಾಜಿ ಕಾರ್ಯನಿರ್ವಾಹಕೇತರ ಅಧ್ಯಕ್ಷ ಟಿ ಎನ್ ಮನೋಹರನ್ ಅವರನ್ನು ಲಕ್ಷ್ಮಿ ವಿಲಾಸ್ ಬ್ಯಾಂಕಿನ ನಿರ್ವಾಹಕರನ್ನಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)  ನೇಮಕ ಮಾಡಿತು.

ಬ್ಯಾಂಕ್‌ಗೆ ನಿಷೇಧವನ್ನು ವಿಧಿಸಲಾಗಿದೆ. ಜೊತೆಗೆ ನಗದು ಪಡೆಯಲು ಖಾತೆದಾರರಿಗೆ ಪ್ರತಿ ಖಾತೆಗೆ 25 ಸಾವಿರ ರೂ. ಪಡೆಯುವ ಅವಕಾಶ ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮನೋಹರನ್, ಡಿಸೆಂಬರ್ 16ರ ಗಡುವಿನ ಮೊದಲು ಬ್ಯಾಂಕ್ ಅನ್ನು ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ಸಮಯೋಚಿತವಾಗಿ ವಿಲೀನಗೊಳಿಸುವ ವಿಶ್ವಾಸವಿದೆ ಎಂದು ಹೇಳಿದರು.

ಠೇವಣಿದಾರರ ಹಣ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದ್ದು ಠೇವಣಿದಾರರಿಗೆ ಮರುಪಾವತಿ ಮಾಡಲು ಬ್ಯಾಂಕ್ ಸಾಕಷ್ಟು ಹಣವನ್ನು ಹೊಂದಿದೆ ಎಂದು ಅವರು ಹೇಳಿದರು.

ಲಕ್ಷ್ಮಿ ವಿಲಾಸ್ ಬ್ಯಾಂಕ್ 20,000 ಕೋಟಿ ರೂ. ಠೇವಣಿ ಮತ್ತು 17,000 ಕೋಟಿ ರೂ. ಆರ್‌ಬಿಐ ಅಂತಿಮ ವಿಲೀನ ಕರಡನ್ನು ನವೆಂಬರ್ 20 ರಂದು ನೀಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com