ಸಹಾರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ನಿಧನ

ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮಂಗಳವಾರ ನಿಧನರಾದರು. 75 ವರ್ಷದ ಸುಬ್ರತಾ ರಾಯ್ ಅವರು ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುಬ್ರತಾ ರಾಯ್
ಸುಬ್ರತಾ ರಾಯ್
Updated on

ಮುಂಬೈ: ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮಂಗಳವಾರ ನಿಧನರಾದರು. 75 ವರ್ಷದ ಸುಬ್ರತಾ ರಾಯ್ ಅವರು ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಹಾರಾ ಕುಟುಂಬದ ಮುಖ್ಯಸ್ಥ ಸುಬ್ರತಾ ರಾಯ್ ಬಹಳ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸುಬ್ರತಾ ರಾಯ್ ಅವರು 1948ರ ಜೂನ್ 10ರಂದು ಜನಿಸಿದರು. ಭಾರತದ ಪ್ರಮುಖ ಉದ್ಯಮಿ ಮತ್ತು ಸಹಾರಾ ಇಂಡಿಯಾ ಪರಿವಾರದ ಸಂಸ್ಥಾಪಕರಾಗಿದ್ದರು. ಅವರನ್ನು ನಾಡಿನಾದ್ಯಂತ ‘ಸಹರಾಶ್ರೀ’ ಎಂದೂ ಕರೆಯಲಾಗುತ್ತಿತ್ತು.

ಸುಬ್ರತಾ ರಾಯ್ ನಿಧನಕ್ಕೆ ಸಮಾಜವಾದಿ ಪಕ್ಷ ಸಂತಾಪ ವ್ಯಕ್ತಪಡಿಸಿದ್ದು, ಸುಬ್ರತಾ ರಾಯ್ ಜಿ ಅವರ ನಿಧನದಿಂದ ದುಃಖವಾಗಿದೆ ಎಂದು ಹೇಳಿದೆ. ಅವರ ಆತ್ಮಕೆ ಶಾಂತಿ ಸಿಗಲಿ. ಮೃತರ ಕುಟುಂಬದ ಸದಸ್ಯರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿ ಸಿಗಲಿ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದೆ.

ಹಲವು ವರ್ಷಗಳಿಂದ ಜನರ ಹಣವನ್ನು ಪಾವತಿಸದ ಸಹಾರಾ ಇಂಡಿಯಾ ವಿರುದ್ಧ ಪಾಟ್ನಾ ಹೈಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಜನರು ಈ ಹಣವನ್ನು ಕಂಪನಿಯ ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರು. ಆದರೆ ನಂತರ ಸುಬ್ರತಾ ರಾಯ್ ಗೆ ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿತ್ತು. ಕಳೆದ ವರ್ಷ ಪಾಟ್ನಾ ಹೈಕೋರ್ಟ್‌ನ ಬಂಧನ ಆದೇಶವನ್ನು ತಕ್ಷಣವೇ ಆಲಿಸುವ ಮೂಲಕ ಸುಪ್ರೀಂ ಕೋರ್ಟ್ ಅದಕ್ಕೆ ತಡೆ ನೀಡಿತ್ತು. ಅಲ್ಲದೆ, ಅವರ ವಿರುದ್ಧ ಯಾವುದೇ ಮುಂದಿನ ಕ್ರಮದ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಲಾಯಿತು.

ಸುಬ್ರತಾ ರಾಯ್ ವಿರುದ್ಧ ಇದೇ ರೀತಿಯ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಅದೇ ಸಮಯದಲ್ಲಿ, ಹೂಡಿಕೆದಾರರ ಹಣವನ್ನು ಹಿಂದಿರುಗಿಸುವ ಬಗ್ಗೆ, ಸಹಾರಾ ಇಂಡಿಯಾ ಅವರು ಸಂಪೂರ್ಣ ಮೊತ್ತವನ್ನು ಸೆಬಿಗೆ ಠೇವಣಿ ಮಾಡಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com