ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಮೂರನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಗವರ್ನರ್ ಹೇಳಿದ್ದೇನು?

ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ ಮೂರನೇ ಬಾರಿಗೆ ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಿದೆ. 
ಆರ್ ಬಿಐ ಗವರ್ನರ್
ಆರ್ ಬಿಐ ಗವರ್ನರ್
Updated on

ಮುಂಬೈ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ ಮೂರನೇ ಬಾರಿಗೆ ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಿದೆ. 

ರೆಪೊ ದರವು ರಿಸರ್ವ್ ಬ್ಯಾಂಕ್ ಇತರ ಬ್ಯಾಂಕ್‌ಗಳಿಗೆ ನೀಡುವ ಬಡ್ಡಿದರವಾಗಿದೆ.ನಮ್ಮ ಆರ್ಥಿಕತೆಯು ಸಮಂಜಸವಾದ ವೇಗದಲ್ಲಿ ಬೆಳವಣಿಗೆಯನ್ನು ಮುಂದುವರೆಸಿದೆ, ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ, ಇದು ಜಾಗತಿಕ ಬೆಳವಣಿಗೆಗೆ ಸುಮಾರು ಶೇಕಡಾ 15ರಷ್ಟು ಕೊಡುಗೆ ನೀಡುತ್ತದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಮುಂಬೈಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು. ಹಣದುಬ್ಬರದ ಬಗ್ಗೆ ಮಾತನಾಡುತ್ತಾ ಶಕ್ತಿಕಾಂತ್ ದಾಸ್, ಮೇ ತಿಂಗಳಲ್ಲಿ ಶೇಕಡಾ 4.3ರಷ್ಟು ಕಡಿಮೆ ತಲುಪಿದ ನಂತರ ಮುಖ್ಯ ಹಣದುಬ್ಬರವು ಜೂನ್‌ನಲ್ಲಿ ಏರಿಕೆಯಾಯಿತು. ಜುಲೈ ಮತ್ತು ಆಗಸ್ಟ್‌ನಲ್ಲಿ ಸಹ ಏರಿಕೆಯಾಗಲಿದೆ ಎಂದು ಹೇಳಿದರು.

ಕೇಂದ್ರೀಯ ಬ್ಯಾಂಕ್ ಹಣದುಬ್ಬರ ಮುನ್ಸೂಚನೆಯನ್ನು ಶೇಕಡಾ 5.1 ರಿಂದ ಶೇಕಡಾ 5.4 ಕ್ಕೆ ಏರಿಸಿದೆ. ಎಂಪಿಸಿ ನಿರ್ಧಾರಗಳನ್ನು ಪ್ರಕಟಿಸುವಾಗ, ಹವಾಮಾನ ಪರಿಸ್ಥಿತಿಗಳು ಮತ್ತು ಆಹಾರದ ಬೆಲೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. 

ಜಾಗತಿಕ ಆರ್ಥಿಕತೆಯು ತೀವ್ರ ಹವಾಮಾನ ಪರಿಸ್ಥಿತಿಗಳು ಮತ್ತು ಹಣದುಬ್ಬರ ಸವಾಲುಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು.ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಪ್ರಕಾರ ಕೇಂದ್ರೀಯ ಬ್ಯಾಂಕ್ ಸ್ಥಿರತೆಯನ್ನು ಆದ್ಯತೆಯಾಗಿ ಇರಿಸಿದೆ. ದೇಶೀಯ ಆರ್ಥಿಕತೆಯ ಮೂಲಭೂತ ಅಂಶಗಳು ಸುಧಾರಿಸುತ್ತಿವೆ. ಪ್ರಪಂಚದಾದ್ಯಂತ ನೀತಿಯನ್ನು ಸಾಮಾನ್ಯಗೊಳಿಸುವ ವಿಷಯದಲ್ಲಿ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಭಾರತದ ಆರ್ಥಿಕತೆ ಮತ್ತು ಹಣಕಾಸು ವಲಯವು ಚೇತರಿಸಿಕೊಳ್ಳುವ ಅಂಶ ನೋಡಿದರೆ ತೃಪ್ತಿಯಾಗುತ್ತದೆ ಎಂದರು. ಮುಖ್ಯ ಹಣದುಬ್ಬರವು ಗುರಿ ಶೇಕಡಾ 4ಕ್ಕಿಂತ ಹೆಚ್ಚಿದೆ. ವರ್ಷದ ಉಳಿದ ಅವಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಉಳಿಯುವ ನಿರೀಕ್ಷೆಯಿದೆ. ಆರ್ಥಿಕ ಬೆಳವಣಿಗೆ ಸಮಾಧಾನಕರವಾಗಿದೆ ಎಂದರು.

ತೈಲ ಬೆಲೆ, ಆಹಾರ ಪದಾರ್ಥಗಳ ಬೆಲೆ ಎಲ್ಲವೂ ಹೆಚ್ಚಿದೆ. ಹಣದುಬ್ಬರದ ನಿರೀಕ್ಷೆಗಳೂ ಹೆಚ್ಚಿವೆ. ಹೆಚ್ಚುತ್ತಿರುವ ಬ್ಯಾಂಕ್ ಠೇವಣಿಗಳ ಮೇಲೆ ಆರ್‌ಬಿಐ ಹೆಚ್ಚುವರಿ ನಗದು ಮೀಸಲು ಅವಶ್ಯಕತೆಗಳನ್ನು ವಿಧಿಸಿದೆ. 

ಭಾರತದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಆಹಾರದ ಬೆಲೆಗಳ ಏರಿಕೆಯಿಂದ ಶೇಕಡಾ 6.40 ಕ್ಕೆ ವೇಗವನ್ನು ಹೆಚ್ಚಿಸಿದೆ, ಆಹಾರ ಪದಾರ್ಥಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಹೆಚ್ಚಾಗಿ ದೇಶದಾದ್ಯಂತ ಅನಿಯಮಿತ ಮಾನ್ಸೂನ್ ಕಾರಣದಿಂದಾಗಿ ಗಗನಕ್ಕೇರಿವೆ, ಕಳೆದ ಮೂರು ತಿಂಗಳಲ್ಲಿ ಸಗಟು ಮಾರುಕಟ್ಟೆಗಳಲ್ಲಿ ಟೊಮ್ಯಾಟೊ ಬೆಲೆಗಳು 1,400 ಶೇಕಡಾದಷ್ಟು ಹೆಚ್ಚಿವೆ.

RBI ಸಾಮಾನ್ಯವಾಗಿ ಹಣಕಾಸು ವರ್ಷದಲ್ಲಿ ಆರು ದ್ವೈ-ಮಾಸಿಕ ಸಭೆಗಳನ್ನು ನಡೆಸುತ್ತದೆ, ಅಲ್ಲಿ ಅದು ಬಡ್ಡಿದರಗಳು, ಹಣದ ಪೂರೈಕೆ, ಹಣದುಬ್ಬರ ದೃಷ್ಟಿಕೋನ ಮತ್ತು ವಿವಿಧ ಸ್ಥೂಲ ಆರ್ಥಿಕ ಸೂಚಕಗಳನ್ನು ನಿರ್ಧರಿಸುತ್ತದೆ. ಜೂನ್ ಆರಂಭದಲ್ಲಿ ನಡೆದ ಅದರ ಹಿಂದಿನ ಸಭೆಯಲ್ಲಿ, ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು 6.5 ಪ್ರತಿಶತದಲ್ಲಿ ಬದಲಾಗದೆ ಇರಿಸಲು ಸರ್ವಾನುಮತದಿಂದ ನಿರ್ಧರಿಸಿತು.

ರೆಪೊ ದರ (Repo rate): ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ (Reverse repo rate): ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com