social_icon

ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನು

ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

Published: 09th February 2023 11:15 AM  |   Last Updated: 09th February 2023 11:15 AM   |  A+A-


Former MD and CEO of National Stock Exchange Chitra Ramkrishna

ಎನ್ ಎಸ್ ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣ

Posted By : Ramyashree GN
Source : PTI

ನವದೆಹಲಿ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅವರು ಸಲ್ಲಿಸಿದ್ದ ಅರ್ಜಿಯನ್ನು ಅನುಮತಿಸಲಾಗಿದೆ. ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೇಳಿದರು.

ಎನ್‌ಎಸ್‌ಇ ಸಹ-ಸ್ಥಳ ಹಗರಣದಲ್ಲಿ ಸಿಬಿಐನಿಂದ ಈ ಹಿಂದೆ ಬಂಧಿಸಲ್ಪಟ್ಟಿದ್ದ ಮಾಜಿ ಎನ್‌ಎಸ್‌ಇ ವ್ಯವಸ್ಥಾಪಕ ನಿರ್ದೇಶಕಿಯನ್ನು ಪ್ರಸ್ತುತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈ 14 ರಂದು ಬಂಧಿಸಿತ್ತು. ಸಿಬಿಐ ಪ್ರಕರಣದಲ್ಲಿ ಆಕೆಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಈ ಪಿತೂರಿಯ ಹಿಂದಿನ ಸೂತ್ರಧಾರಿ ಎಂಬ ಕಾರಣಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಸದ್ಯದ ಪ್ರಕರಣದಲ್ಲಿ ಆಕೆಯ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.

ಇಡಿ ಪ್ರಕಾರ, ಫೋನ್ ಕದ್ದಾಲಿಕೆ ಪ್ರಕರಣವು 2009 ರಿಂದ 2017ರ ಅವಧಿಗೆ ಸಂಬಂಧಿಸಿದೆ. ಮಾಜಿ ಎನ್ಎಸ್ಇ ಸಿಇಒ ರವಿ ನಾರಾಯಮ್, ಚಿತ್ರಾ ರಾಮಕೃಷ್ಣ, ಕಾರ್ಯನಿರ್ವಾಹಕ ಉಪಾಧ್ಯಕ್ಷ ರವಿ ವಾರಣಾಸಿ ಮತ್ತು ಮುಖ್ಯಸ್ಥ (ಆವರಣ) ಮಹೇಶ್ ಹಲ್ದಿಪುರ್ ಮತ್ತು ಇತರರು ಎನ್‌ಎಸ್‌ಇ ಹಾಗೂ ಅದರ ಉದ್ಯೋಗಿಗಳನ್ನು ವಂಚಿಸಲು ಸಂಚು ರೂಪಿಸಿದ್ದರು. ಎನ್‌ಎಸ್‌ಇಯ ಸೈಬರ್ ದೋಷಗಳ ಆವರ್ತಕ ಅಧ್ಯಯನ ಮಾಡುವ ನೆಪದಲ್ಲಿ ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ಕದ್ದಾಲಿಸುವಲ್ಲಿ ಐಎಸ್ಇಸಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ತೊಡಗಿಸಿಕೊಂಡಿದೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸು: ಎನ್ಎಸ್ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾ

ಜಾಮೀನು ಕೋರಿ ಚಿತ್ರಾ ರಾಮಕೃಷ್ಣ ಅವರು, ತಮ್ಮ ವಿರುದ್ಧ ಯಾವುದೇ ನಿಗದಿತ ಅಪರಾಧವನ್ನು ಮಾಡಲಾಗಿಲ್ಲ ಮತ್ತು ಆರೋಪಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ವಾದಿಸಿದ್ದರು.

ಚಿತ್ರ ರಾಮಕೃಷ್ಣ ಅವರು 2009 ರಲ್ಲಿ ಎನ್ಎಸ್ಇಯಲ್ಲಿ ಜಂಟಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಕಗೊಂಡರು ಮತ್ತು 2013ರ ಮಾರ್ಚ್ 31 ರವರೆಗೆ ಆ ಸ್ಥಾನದಲ್ಲಿ ಇದ್ದರು. ಅವರು 2013ರ ಏಪ್ರಿಲ್ 1 ರಂದು ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಉನ್ನತೀಕರಿಸಲ್ಪಟ್ಟರು. ಎನ್ಎಸ್ಇನಲ್ಲಿ ಅವರ ಅಧಿಕಾರಾವಧಿಯು ಡಿಸೆಂಬರ್ 2016 ರಲ್ಲಿ ಕೊನೆಗೊಂಡಿತು.


Stay up to date on all the latest ವಾಣಿಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp