ಸಾಂದರ್ಭಿಕ ಚಿತ್ರ
ವಾಣಿಜ್ಯ
ಈರುಳ್ಳಿ ಮೇಲಿನ ರಫ್ತು ನಿಷೇಧ ವಿಸ್ತರಿಸಿದ ಕೇಂದ್ರ
ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಅದರ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಮುಂದಿನ ಆದೇಶದವರೆಗೆ ಈರುಳ್ಳಿ ಮೇಲಿನ ರಫ್ತು ನಿಷೇಧವನ್ನು ಶನಿವಾರ ವಿಸ್ತರಿಸಿದೆ.
ನವದೆಹಲಿ: ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಅದರ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಮುಂದಿನ ಆದೇಶದವರೆಗೆ ಈರುಳ್ಳಿ ಮೇಲಿನ ರಫ್ತು ನಿಷೇಧವನ್ನು ಶನಿವಾರ ವಿಸ್ತರಿಸಿದೆ.
ಮೊದಲು ಈ ವರ್ಷ ಮಾರ್ಚ್ 31ರವರೆಗೆ ಈರುಳ್ಳಿ ರಫ್ತು ನಿಷೇಧಿಸಲಾಗಿತ್ತು.
"ಈರುಳ್ಳಿ ಮೇಲಿನ ರಫ್ತು ನಿಷೇಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ" ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ(ಡಿಜಿಎಫ್ಟಿ) ಮಾರ್ಚ್ 22 ರ ಅಧಿಸೂಚನೆಯಲ್ಲಿ ತಿಳಿಸಿದೆ.
DGFT ರಫ್ತು ಮತ್ತು ಆಮದು-ಸಂಬಂಧಿತ ಸಮಸ್ಯೆಗಳೊಂದಿಗೆ ವ್ಯವಹರಿಸುವ ಸಚಿವಾಲಯದ ಒಂದು ಅಂಗವಾಗಿದೆ.
ಕೇಂದ್ರ ಸರ್ಕಾರ ಡಿಸೆಂಬರ್ 8, 2023 ರಂದು ಈರುಳ್ಳಿ ರಫ್ತು ನಿಷೇಧಿಸಿತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ