SEBI ಅಧ್ಯಕ್ಷೆ ಮಾಧವಿ ಪುರಿ ಬುಚ್ ಗೈರು: PAC ಸಭೆ ಮುಂದೂಡಿದ ಕೆಸಿ ವೇಣುಗೋಪಾಲ್

ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮುಖ್ಯಸ್ಥ ಮಾಧಬಿ ಪುರಿ ಬುಚ್ ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಅವರು ಸಭೆಗೆ ಗೈರಾಗುವ ಕುರಿತು ಮಾಹಿತಿ ನೀಡಿದರು.
SEBI chief Buch
SEBI ಮುಖ್ಯಸ್ಥೆ ಮಾಧಬಿ ಬುಚ್
Updated on

ನವದೆಹಲಿ: ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಅಧಿಕಾರಿಗಳು ಸಭೆಗೆ ಗೈರಾಗುವ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಯನ್ನು ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮುಖ್ಯಸ್ಥ ಮಾಧಬಿ ಪುರಿ ಬುಚ್ ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಅವರು ಸಭೆಗೆ ಗೈರಾಗುವ ಕುರಿತು ಮಾಹಿತಿ ನೀಡಿದರು. ಅಲ್ಲದೆ ಕೆಲ ಅಧಿಕಾರಿಗಳು ಕೂಡ ಸಭೆಗೆ ಗೈರಾಗುತ್ತಿರುವ ಹಿನ್ನಲೆಯಲ್ಲಿ ಪಿಎಸಿ ಸಭೆಯನ್ನು ಮುಂದೂಡಲಾಗಿದೆ ಎನ್ನಲಾಗಿದೆ.

ಈ ಬಗ್ಗೆ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. "ಇಂದು ಬೆಳಿಗ್ಗೆ 9:30 ಕ್ಕೆ, ನಾವು ವೈಯಕ್ತಿಕ ತುರ್ತು ಪರಿಸ್ಥಿತಿಯಿಂದಾಗಿ ದೆಹಲಿಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎಂದು ಸೆಬಿ ಅಧ್ಯಕ್ಷರು ಮತ್ತು ಇತರ ಸದಸ್ಯರು ಹೇಳಿದ್ದಾರೆ. ಹೀಗಾಗಿ ಸಭೆಯನ್ನು ಮತ್ತೊಂದು ದಿನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ನಿಂದ ಎದ್ದ ಹಿತಾಸಕ್ತಿಯ ಸಂಘರ್ಷದ ಆರೋಪಗಳ ಹಿನ್ನಲೆಯಲ್ಲಿ ಮಾರುಕಟ್ಟೆ ನಿಯಂತ್ರಕನ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತಿರುವ PAC ಮುಂದೆ ಹಾಜರಾಗುವಂತೆ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರನ್ನು ಕೇಳಲಾಗಿತ್ತು. ಆದರೆ ಈ ಸಮಿತಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಅವರು ರಾಜಕೀಯ ಪ್ರೇರಿತ ಹೆಜ್ಜೆ ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಸದಸ್ಯ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.

ಸಮಿತಿಯ ಸದಸ್ಯ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ವೇಣುಗೋಪಾಲ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ದೇಶದ ಆರ್ಥಿಕ ರಚನೆ ಮತ್ತು ಆರ್ಥಿಕತೆಯನ್ನು "ಅಸ್ಥಿರಗೊಳಿಸಲು" ಅಸ್ತಿತ್ವದಲ್ಲಿಲ್ಲದ ವಿಷಯಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

SEBI chief Buch
ಲಾಭ ಗಳಿಸುತ್ತಿರುವ 'ದೊಡ್ಡವರ' ಹೆಸರು ಬಹಿರಂಗಪಡಿಸಿ: SEBI ಗೆ ರಾಹುಲ್ ಗಾಂಧಿ ಆಗ್ರಹ

ವೇಣುಗೋಪಾಲ್ ಅವರನ್ನು "ಅಸಂವಿಧಾನಿಕ ಮತ್ತು ಅವಹೇಳನಕಾರಿ" ನಡತೆ ಎಂದು ಆರೋಪಿಸಿದ ದುಬೆ, ಲೋಕಸಭೆ ಚುನಾವಣೆಯ ನಂತರ ಮತದಾರರು ತಮ್ಮ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಒತ್ತಾಯಿಸಿದ್ದರಿಂದ ಕಾಂಗ್ರೆಸ್ ನಾಯಕನ ನಡವಳಿಕೆಯು ರಾಜಕೀಯ ಪ್ರೇರಣೆಗಳಿಂದ ಮಾರ್ಗದರ್ಶಿಸಲ್ಪಟ್ಟಿದೆ ಎಂದಿದ್ದಾರೆ. ಬಚ್ ವಿರುದ್ಧ ಹಿಂಡೆನ್‌ಬರ್ಗ್‌ನಂತಹ ವಿದೇಶಿ ಕಂಪನಿಯ ಪರಿಶೀಲಿಸದ ಆರೋಪಗಳು ಇಂತಹ ಅಭಿಯಾನದ ಭಾಗವಾಗಿದೆ ಎಂದು ಪ್ರತಿಪಾದಿಸಿದ ಅವರು, ಈ ಟೂಲ್‌ಕಿಟ್‌ನ 'ಇಂಡಿಯಾ ಚಾಪ್ಟರ್' ಸಕ್ರಿಯವಾಗಿದೆ ಎಂದು ಆರೋಪಿಸಿದರು.

ಅಲ್ಲದೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರು ವೇಣುಗೋಪಾಲ್ ಸ್ವಯಂ ಪ್ರೇರಿತ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಅದರ ಮೈತ್ರಿ ಪಾಲುದಾರರು ಸೇರಿದಂತೆ ಹಲವಾರು ಪಿಎಸಿ ಸದಸ್ಯರು ವೇಣುಗೋಪಾಲ್ ಅವರ ಕಾರ್ಯವೈಖರಿ ವಿರುದ್ಧ ಎಲ್ಎಸ್ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com