Infosys ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ.
Infosys
ಇನ್ಫೋಸಿಸ್
Updated on

ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್‌ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಾಮೂಹಿಕ ವಜಾ ವಿಚಾರದಲ್ಲಿ ಕರ್ನಾಟಕ ಮಧ್ಯಪ್ರವೇಶಿಸಿ ವಿವಾದವನ್ನು ಪರಿಹರಿಸಬೇಕು ನಿರ್ದೇಶನ ನೀಡಿದೆ. ಅಲ್ಲದೆ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

Infosys
ಇನ್ಫೋಸಿಸ್‌ನಲ್ಲಿ ಸಾಮೂಹಿಕ ವಜಾ: ರಾತ್ರೋರಾತ್ರಿ ಟ್ರೇನಿಗಳನ್ನು ಹೊರ ಹಾಕಿದ ಐಟಿ ಕಂಪನಿ ವಿರುದ್ಧ ಆಕ್ರೋಶ

ಕಳೆದ ಶುಕ್ರವಾರ ತರಬೇತಿ ಪಡೆದ ಸುಮಾರು 400 ನೌಕರರನ್ನು ಇನ್ಫೋಸಿಸ್ ವಜಾಗೊಳಿಸಿದೆ. ಈ ವಜಾಗೊಳಿಸುವಿಕೆಯನ್ನು 'ಅಕ್ರಮ, ಅನೈತಿಕ' ಎಂದು ಜರೆದಿರುವ ಎನ್‌ಐಟಿಇಎಸ್‌, ಇದು 'ಕಾರ್ಮಿಕ ಕಾನೂನುಗಳ ಉಲ್ಲಂಘನೆ' ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com