ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

'ಭಾರತದ ಜನರಿಗೆ ದೀಪಾವಳಿ ಉಡುಗೊರೆ' ನೀಡುವ ಭರವಸೆಯನ್ನು ಈಡೇರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ ಅಂಬಾನಿ.
Mukesh Ambani
ಮುಖೇಶ್ ಅಂಬಾನಿ
Updated on

ಮುಂಬೈ: ಎರಡನೇ ತಲೆಮಾರಿನ ಜಿಎಸ್‌ಟಿ ಸುಧಾರಣೆಯನ್ನು ದೊಡ್ಡ ಉತ್ತೇಜಕ ಎಂದು ಬಣ್ಣಿಸಿದ ಬಿಲಿಯನೇರ್ ಉದ್ಯಮಿ ಮುಖೇಶ್ ಅಂಬಾನಿ, ತಮ್ಮ ಸಂಸ್ಥೆಯು, ತೆರಿಗೆ ದರಗಳಲ್ಲಿನ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ಭರವಸೆ ನೀಡಿದ್ದಾರೆ.

ದೇಶದ ಅತಿದೊಡ್ಡ ಚಿಲ್ಲರೆ ವ್ಯಾಪಾರ ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅವರು, ಭಾರತದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ದರಗಳ ಎರಡನೇ ತಲೆಮಾರಿನ ಸುಧಾರಣೆಗಳನ್ನು ಸ್ವಾಗತಿಸಿದ್ದಾರೆ.

'ಭಾರತದ ಜನರಿಗೆ ದೀಪಾವಳಿ ಉಡುಗೊರೆ' ನೀಡುವ ಭರವಸೆಯನ್ನು ಈಡೇರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ ಅಂಬಾನಿ, "ಗ್ರಾಹಕರಿಗೆ ಉತ್ಪನ್ನಗಳು ಮತ್ತು ಸೇವೆಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡುವ, ವ್ಯವಹಾರ ಹೆಚ್ಚಿಸುವ ಸಂಕೀರ್ಣತೆಯನ್ನು ಸರಾಗಗೊಳಿಸುವ, ಹಣದುಬ್ಬರವನ್ನು ಕಡಿಮೆ ಮಾಡುವ ಮತ್ತು ಚಿಲ್ಲರೆ ವಲಯದಾದ್ಯಂತ ಬಳಕೆಯ ಬೆಳವಣಿಗೆಯನ್ನು ಹೆಚ್ಚಿಸುವತ್ತ ಜಿಎಸ್‌ಟಿ ತರ್ಕಬದ್ಧಗೊಳಿಸುವಿಕೆಯು ಒಂದು ಪ್ರಗತಿಪರ ಹೆಜ್ಜೆಯಾಗಿದೆ" ಎಂದು ಶ್ಲಾಘಿಸಿದ್ದಾರೆ.

Mukesh Ambani
"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಇದು ಭಾರತದ ಆರ್ಥಿಕ ಬೆಳವಣಿಗೆಗೆ ದೊಡ್ಡ ಉತ್ತೇಜಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮುಖೇಶ್ ಅಂಬಾನಿ ಹೇಳಿದ್ದಾರೆ.

"ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರವು ಶೇಕಡಾ 7.8 ಕ್ಕೆ ತಲುಪಿರುವುದರಿಂದ, ಹೊಸ ಸುಧಾರಣೆಗಳು ಆರ್ಥಿಕತೆಯನ್ನು ಇನ್ನಷ್ಟು ವೇಗಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ. ಆರ್ಥಿಕ ಬೆಳವಣಿಗೆಯ ದರ ಎರಡಂಕಿಯ ಹತ್ತಿರಕ್ಕೆ ಹೋಗುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Mukesh Ambani
ಹೊಸ AI ಜಗತ್ತನ್ನು ರಿಲಯನ್ಸ್ ಭಾರತಕ್ಕೆ ನೀಡಲಿದೆ, ನಾವು ಸಿದ್ಧವಾಗಬೇಕಿದೆ! (ಹಣಕ್ಲಾಸು)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com