ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ಆದಾಯ ನಷ್ಟ!

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರಗೊಳಿಸಲು ಭಾರತ ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಂದ 3 ರೂಪಾಯಿಗೆ ಇಳಿಸಿದೆ.
representation purpose only
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರಗೊಳಿಸಲು ಭಾರತ ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಂದ 3 ರೂಪಾಯಿಗೆ ಇಳಿಸಿದೆ. ಇನ್ನು ಡೀಸೆಲ್ ಮೇಲಿನ ಸುಂಕವನ್ನು ಲೀಟರ್‌ಗೆ 10 ರೂಪಾಯಿಯಿಂದ ಶೂನ್ಯಕ್ಕೆ ಇಳಿಸಿದೆ. ತೈಲ ಕಂಪನಿಗಳು ಅನುಭವಿಸುವ ನಷ್ಟವನ್ನು ಕಡಿಮೆ ಮಾಡಲು ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದ್ದು ಈ ಕಡಿತದಿಂದ ಪ್ರತಿ 15 ದಿನಗಳಿಗೊಮ್ಮೆ ಸುಮಾರು 7,000 ಕೋಟಿ ನಷ್ಟವಾಗುತ್ತಿದೆ ಎಂದು CBIC ಅಧ್ಯಕ್ಷ ವಿವೇಕ್ ಚತುರ್ವೇದಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ಬೆಲೆಗಳು ಏರುತ್ತಿರುವುದರಿಂದ ಈ ಎರಡು ಇಂಧನಗಳ ಮಾರಾಟದಲ್ಲಿ ಭಾರಿ ನಷ್ಟವನ್ನು ಅನುಭವಿಸುತ್ತಿದ್ದರೂ, OMCಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳನ್ನು ಹೆಚ್ಚಿಸಿಲ್ಲ. ಅಬಕಾರಿ ಸುಂಕದಲ್ಲಿನ ಕಡಿತವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಟರ್ಬೈನ್ ಇಂಧನ (ATF) ದೇಶೀಯ ಲಭ್ಯತೆಯನ್ನು ಖಚಿತಪಡಿಸುತ್ತದೆ ಎಂದು CBIC ಅಧ್ಯಕ್ಷ ವಿವೇಕ್ ಚತುರ್ವೇದಿ ಹೇಳಿದ್ದಾರೆ.

representation purpose only
ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಉದ್ದೇಶವು ತೈಲ ಮಾರುಕಟ್ಟೆ ಕಂಪನಿಗಳ ನಷ್ಟವನ್ನು (ಕಡಿಮೆ ವಸೂಲಿ) ಕಡಿಮೆ ಮಾಡುವುದು ಮತ್ತು ಸಾಮಾನ್ಯ ಜನರಿಗೆ ಇಂಧನ ಬೆಲೆಗಳು ಹೆಚ್ಚಾಗದಂತೆ ತಡೆಯುವುದೇ ಆಗಿದೆ ಎಂದು ಹೇಳಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿನ ತೀವ್ರ ಏರಿಕೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸರ್ಕಾರವು ಪ್ರತಿ 15 ದಿನಗಳಿಗೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ದೇಶೀಯ ಬಳಕೆಯ ಹೊರತಾಗಿ ಭಾರತವು ಹೆಚ್ಚಿನ ಪ್ರಮಾಣದಲ್ಲಿ ಡೀಸೆಲ್ ಮತ್ತು ವಾಯುಯಾನ ಟರ್ಬೈನ್ ಇಂಧನ (ATF) ಗಳನ್ನು ರಫ್ತು ಮಾಡುತ್ತದೆ. ಜಾಗತಿಕ ಇಂಧನ ಬಿಕ್ಕಟ್ಟಿನ ಸಂದರ್ಭದಲ್ಲಿ, ರಫ್ತುಗಳನ್ನು ನಿಯಂತ್ರಿಸಲು ಮತ್ತು ದೇಶೀಯ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ರಫ್ತು ತೆರಿಗೆಗಳನ್ನು ಹೆಚ್ಚಿಸಿದೆ. ರಫ್ತುನ್ನು ತಡೆಯಲು ಮತ್ತು ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಸರ್ಕಾರವು ಡೀಸೆಲ್ ಮೇಲೆ ಲೀಟರ್‌ಗೆ 21.5 ರೂ. ಮತ್ತು ATF ಮೇಲೆ ಲೀಟರ್‌ಗೆ 29.5 ರೂ. ರಫ್ತು ಸುಂಕವನ್ನು ವಿಧಿಸಿದೆ ಎಂದು CBIC ಮುಖ್ಯಸ್ಥರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com