ನಟ ಸಂಜಯ್ ದತ್ ವಿರುದ್ಧ ಪಿಐಎಲ್ ದಾಖಲಿಸಲು ಹೈಕೋರ್ಟ್ ನಿರಾಕರಣೆ

ಸಂಜಯ್  ದತ್
ಸಂಜಯ್ ದತ್
Updated on

ಬೆಂಗಳೂರು: ಕೆಜಿಎಫ್ -2 ಸಿನಿಮಾ ಮತ್ತು ನಟ ಸಂಜಯ್ ದತ್ ವಿರುದ್ಧ ಸಾರ್ನಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಸಂಜಯ್ ದತ್ 1993ರಲ್ಲಿ ನಡೆದ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಚಾರ್ಜ್‌ಷೀಟ್‌ನಲ್ಲಿ ಅವರ ಹೆಸರಿತ್ತು. ಅದಕ್ಕೆ ಅವರು ಶಿಕ್ಷೆಯನ್ನೂ ಅನುಭವಿಸಿದ್ದರು. 2016ರಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

ಸಂಜಯ್ ದತ್ ಒಬ್ಬ ದೇಶದ್ರೋಹಿ. ಅವರು ಕರ್ನಾಟಕಕ್ಕೆ ಕಾಲಿಡಬಾರದು. ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಬಾರದು. ಅವರನ್ನು ಈ ಚಿತ್ರದಿಂದಲೇ ಕೈ ಬಿಡಬೇಕು ಎಂದು ಆಗ್ರಹಿಸಿ ಶಿವಶಂಕರ್ ಎಂಬುವವರು  ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಕೈಗೆತ್ತಿಗೊಂಡ ಮುಖ್ಯ ನ್ಯಾಯ ಮೂರ್ತಿ ಅಭಯ್ ಶ್ರೀನಿವಾಸ್ ಓಕಾ  ಮತ್ತು ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿದಾರ ಸಲ್ಲಿಸರುವ ಅರ್ಜಿಯಲ್ಲಿ ನಟನ ಸಿನಿಮಾವನ್ನು ನಿಷೇಧಿಸಲು ಸರಿಯಾದ ಕಾರಣಗಳನ್ನು ನೀಡಿಲ್ಲ ಎಂದು ಹೇಳಿರುವ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com