ಮುಂಬಯಿ: ನನ್ನ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡಬೇಕೆಂದು ಬಯಸಿ ನಾನು ಯಾವತ್ತೂ ಸಿನಿಮಾ ಮಾಡುವುದಿಲ್ಲ ಎಂದು ನಟಿ ಐಶ್ವರ್ಯ ರೈ ಹೇಳಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿ ಚಿತ್ರದ ಹಿಟ್ ಕುರಿತು ಯೋಚನೆ ಮಾಡಿ ನಟಿಸುವುದಿಲ್ಲ, ಅದನ್ನು ನಾನು ಎಂದಿಗೂ ನಿರೀಕ್ಷೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನನ್ನ ಅಭಿಮಾನಿಗಳು ಪ್ರೋತ್ಸಾಹವೇ ಸಾಕು ಎಂದು ತಿಳಿಸಿದ್ದಾರೆ. ಈ ಚಿತ್ರವನ್ನು ದೇಶಾದ್ಯಂತ ತೆರಿಗೆ ಇಲ್ಲದೇ ಬಿಡುಗಡೆ ಮಾಡಲಾಗುತ್ತಿದೆ. ಇದೊಂದು ಸೂಕ್ಷ್ಮ ಕಥಾ ಹಂದರವುಳ್ಳ ಚಿತ್ರವಾಗಿದ್ದು ಪ್ರೇಕ್ಷಕನಿಗೆ ಇಷ್ಟವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಸರಬ್ಜಿತ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ರಣದೀಪ್ ಹೂಡಾ ಹಾಗೂ ರಿಚಾ ಚಡ್ಡಾ ಅಭಿನಯ ಅವೋಘವಾಗಿ ಮೂಡಿ ಬಂದಿದ್ದು ಪ್ರೇಕ್ಷಕರಿಗೆ ಈ ಚಿತ್ರ ಇಷ್ಟವಾಗ್ತಿದೆ.
ಚಿತ್ರದ ಪ್ರಮುಖ ಪಾತ್ರದಲ್ಲಿ ಐಶ್ವರ್ಯ ರೈ ಹಾಗೂ ರಣದೀಪ್ ಅಭಿನಯಿಸಿದ್ದಾರೆ. ಇನ್ನೂ ಚಿತ್ರದಲ್ಲಿ ಸರಬ್ಜಿತ್ ಸಹೋದರಿ ಪಾತ್ರ ಮಾಡಿರುವ ಐಶ್ವರ್ಯ ರೈ ಅವರ ನಟನೆ ಎಲ್ಲರನ್ನು ತನ್ನತ್ತ ಸೆಳೆಯುವಂತೆ ಮಾಡುತ್ತದೆ.
Advertisement