ವಾಲ್ಮೀಕಿ ಮಹರ್ಷಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ರಾಖಿ ಸಾವಂತ್ ಬಂಧನ

ರಾಮಾಯಣ ರಚನಕಾರಾ ವಾಲ್ಮೀಕಿ ಮಹರ್ಷಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ...
ರಾಖಿ ಸಾವಂತ್
ರಾಖಿ ಸಾವಂತ್
Updated on
ಮುಂಬೈ: ರಾಮಾಯಣ ರಚನಕಾರಾ ವಾಲ್ಮೀಕಿ ಮಹರ್ಷಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. 
ರಾಖಿ ಸಾವಂತ್ ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಿನ್ನೆ ಸ್ಥಳೀಯ ನ್ಯಾಯಾಲಯದವೊಂದು ಬಂಧನ ಆದೇಶವನ್ನು ಜಾರಿಗೊಳಿಸಿತ್ತು. ಈ ಆದೇಶ ಹಿನ್ನೆಲೆ ಪಂಜಾಬ್ ಪೊಲೀಸರು ಮುಂಬೈನಲ್ಲಿ ರಾಖಿ ಸಾವಂತ್ ರನ್ನು ಬಂಧಿಸಿದ್ದಾರೆ. 
ಕಳೆದ ವರ್ಷ ಖಾಸಗಿ ವಾಹನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಖಿ ಸಾವಂತ್ ಅವರು ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಹೇಳಿಕೆಯನ್ನು ನೀಡಿದ್ದರು ಎಂದು ದೂರು ದಾಖಲಾಗಿತ್ತು. 
ಆ ದೂರನ್ನು ಆಧರಿಸಿ ಮಾರ್ಚ್ 9 ರಂದು ನ್ಯಾಯಾಲಯ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಪೊಲೀಸರು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com