ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ಮಿಶ್ರಾ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ, ಚಿತ್ರ ಕಾನೂನಿನ ಚೌಕಟ್ಟಿನೊಳಗೆ ಕಲಾತ್ಮಕ ಅಭಿವ್ಯಕ್ತಿಯನ್ನು ಹೊಂದಿದೆ. ನಿಗದಿಯಂತೆ ನಾಳೆ ಅದು ಬಿಡುಗಡೆಯಾಗುವುದನ್ನು ತಡೆಹಿಡಿಯಲು ಯಾವುದೇ ಸಮರ್ಥನೆಯಿಲ್ಲ ಎಂದು ಹೇಳಿದೆ. ಮಧುರ್ ಭಂಡಾರ್ಕರ್ ನಿರ್ದೇಶಿಸಿರುವ ಚಿತ್ರ 1975ರಿಂದ 1977ರವರೆಗಿನ ತುರ್ತು ಪರಿಸ್ಥಿತಿಯ ಅವಧಿಯ ಕಥೆಯನ್ನು ಹೊಂದಿದೆ.