ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಫರ್ಹಾನ್ ಅಖ್ತರ್ ಅವರು, ಚಿತ್ರೋದ್ಯಮದಲ್ಲಿ ಸಾಕಷ್ಟು ಒಗ್ಗಟ್ಟಿನ ಕೊರತೆ ಇದೆ ಎಂದು ಹೇಳುವ ಮೂಲಕ ಪದ್ಮಾವತಿ ಚಿತ್ರದ ವಿವಾದ ಹಾಗೂ ಇತರೆ ಎರಡು ಪ್ರಾದೇಶಿಕ ಚಿತ್ರಗಳನ್ನು ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್ಎಫ್ ಐ)ದಿಂದ ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.