ಮಾರ್ಗ ಮಧ್ಯೆ ಕಾರಿನ ಹಿಂದಿನ ಚಕ್ರ ಡಫ್ಫರಿನ್ ರಸ್ತೆಯಲ್ಲಿ ಕಾರಿನಿಂದ ಬೇರ್ಪಟ್ಟಿತು. ಟ್ರಾವೆಲ್ ಏಜೆನ್ಸಿ ಸರ್ಕಾರಕ್ಕೆ ಕಾರನ್ನು ಒದಗಿಸಿದ್ದು ಘಟನೆ ಹಿನ್ನೆಲೆಯಲ್ಲಿ ಸರ್ಕಾರ ಏಜೆನ್ಸಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಬಚ್ಚನ್ ಅವರನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲು ಟ್ರಾವೆಲ್ ಏಜೆನ್ಸಿಗೆ ಭಾರೀ ಮೊತ್ತ ನೀಡಲಾಗಿತ್ತು ಎಂದು ಸರ್ಕಾರದ ಸಚಿವಾಲಯದ ಹಿರಿಯ ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ದೃಢಪಡಿಸಿದ್ದಾರೆ.