ನನಗೆ ಭಾರತವನ್ನು ಅರ್ಥಮಾಡಿಕೊಳ್ಳಲಾಗಿಲ್ಲ: ಅದಿತಿ ರಾವ್

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಚಿತ್ರಕ್ಕೆ ದೇಶಾದ್ಯಂತ ವಿರೋಧ....
ಅದಿತಿ ರಾವ್ ಹೈದರಿ
ಅದಿತಿ ರಾವ್ ಹೈದರಿ
ಮುಂಬೈ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಚಿತ್ರಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಟಿ ಅದಿತಿ ರಾವ್ ಹೈದರಿ, ಜನ ಚಿತ್ರದ ಚಿತ್ರದ ವಿರುದ್ಧ ವ್ಯಕ್ತಪಡಿಸುವ ಆಕ್ರೋಶವನ್ನು ಮಹಿಳೆಯರ ಮೇಲಿನ ಹಿಂಸಾಚಾರ ವಿರುದ್ಧ ಏಕೆ ವ್ಯಕ್ತಪಡಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಭನ್ಸಾಲಿ ಅವರ ವಿವಾದಾತ್ಮಕ ಐತಿಹಾಸಿಕ ಚಿತ್ರದಲ್ಲಿ ನಟಿಸಿರುವ ಅದಿತಿ, ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಆದರೆ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ ಎಂದಿದ್ದಾರೆ.
ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ, ಹಿಂಸೆ ನಡೆದಾಗ, ಹಲ್ಲೆ ನಡೆಸಿದಾಗ, ಮಾರಾಟ ಮಾಡಿದಾಗ ಹತ್ಯೆ ಮಾಡಿದಾಗ ಜನ ಏಕೆ ಈ ರೀತಿ ಆಕ್ರೋಶ ವ್ಯಕ್ತಪಡಿಸುವುದಿಲ್ಲ ಮತ್ತು ಬದಲಾವಣೆಗಾಗಿ ಏಕೆ ಒತ್ತಾಯಿಸುವುದಲ್ಲಿ? ನನಗೆ ಇದು ಅರ್ಥವಾಗುತ್ತಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಆದರೆ ನನಗೆ ಭಾರತವನ್ನು ಅರ್ಥಮಾಡಿಕೊಳ್ಳಲಾಗಿಲ್ಲ ಎಂದು ಅದಿತಿ ಟ್ವೀಟ್ ಮಾಡಿದ್ದಾರೆ.
'ದೇಶ ಇದನ್ನು ಅರ್ಥ ಮಾಡಿಕೊಳ್ಳುತ್ತೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನನ್ನ ದೇಶವನ್ನು ಮರಳಿ ನೀಡುತ್ತೀರಾ?' ಎಂದು ಬಾಲಿವುಡ್ ನಟಿ 'ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com