ಇದಕ್ಕೆ ಸಿಕ್ಕಿಂ ರಾಜ್ಯದವರಿಂದ ಮತ್ತು ಬೇರೆಯವರಿಂದ ಟ್ವಿಟ್ಟರ್ ನಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಿಕ್ಕಿಂ ಒಂದು ಶಾಂತಿಯುತ ರಾಜ್ಯವಾಗಿದ್ದು ಇಲ್ಲಿ ಬಂಡುಕೋರರ ಸಮಸ್ಯೆಯಿಲ್ಲ. ಜವಾಬ್ದಾರಿಯುತವಾಗಿ ಮಾತನಾಡಿ ಎಂದು ಸಿಕ್ಕಿಂ ರಾಜಧಾನಿ ಗಾಂಗ್ ಟಾಕ್ ನಿಂದ ಒಬ್ಬರು ಹೇಳಿದ್ದರೆ ಮತ್ತೊಬ್ಬರು, ಸೆಲೆಬ್ರಿಟಿಗಳು ರಾಜಕೀಯವಾಗಿ ಅನಕ್ಷರಸ್ಥರಾಗಿರುತ್ತಾರೆ. ಈ ಹಿಂದೆ ಕೆಲವು ಸೆಲೆಬ್ರಿಟಿಗಳಿಗೆ ಭಾರತದ ರಾಷ್ಟ್ರಪತಿ ಯಾರು ಎಂದು ಕೇಳಿದರೆ ಗೊತ್ತಿರಲಿಲ್ಲ. ಹೀಗಾಗಿ ಅವರಿಂದ ರಾಜಕೀಯ ಜ್ಞಾನವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.