ಕೃಷ್ಣಮೃಗ ಬೇಟೆ ಪ್ರಕರಣ: ಜೋಧ್ ಪುರ ಕೋರ್ಟ್ ಗೆ ಹಾಜರಾದ ಸಲ್ಮಾನ್ ಖಾನ್

ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಗುರುವಾರ ಜೋಧ್ ಪುರ....
ಸಲ್ಮಾನ್ ಖಾನ್
ಸಲ್ಮಾನ್ ಖಾನ್
ಜೋಧ್ ಪುರ: ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಗುರುವಾರ ಜೋಧ್ ಪುರ ಕೋರ್ಟ್ ನಲ್ಲಿ ಅಂತಿಮ ವಿಚಾರಣೆಗೆ ಹಾಜರಾದರು. 
ಅಂತಿಮ ವಿಚಾರಣೆವರೆಗೆ ಆರೋಪಿಗೆ ಖುದ್ದು ವಿಚಾರಣೆಯಿಂದ ವಿನಾಯ್ತಿ ನೀಡಲಾಗಿತ್ತು. ಆದರೆ ಇಂದು ನಡೆದ ಅಂತಿಮ ವಿಚಾರಣೆಗಾಗಿ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಮಾನ್ ಖಾನ್ ಹಾಜರಾಗಿದ್ದಾರೆ ಎಂದು ಅವರ ವಕೀಲ ಎಚ್ ಎಂ ಸಾರಸ್ವತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅನಧಿಕೃತ ಶಸ್ತ್ರಾಸ್ತ್ರಗಳನ್ನು ಬಳಸಿ, ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಕಂಕಣಿ ಗ್ರಾಮದಲ್ಲಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 13ರಿಂದ ಜೋಧ್ ಪುರ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ಆರಂಭವಾಗಿದೆ. 
ಅಕ್ಟೊಬರ್ ೧, ೧೯೯೮ ರಂದು 'ಹಮ್ ಸಾಥ್ ಸಾಥ್ ಹೈ' ಸಿನೆಮಾ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರು ಕೃಷ್ಣಮೃಗಗಳನ್ನು ಬೇಟೆಯಾಡಿದ್ದು, ಅವರ ಜೊತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಮಾಡಲಾಗಿದೆ.
ಕೃಷ್ಣಮೃಗ ಬೇಟೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com