ಮಂಡ್ಯದ ಕಿಕ್ಕೇರಿ ಗ್ರಾಮದ 40 ಕುಟುಂಬಗಳಿಗೆ ಆಲಿಯಾ ಭಟ್ ಸೋಲಾರ್ ದೀಪಗಳನ್ನು ಒದಗಿಸುವ ಕೆಲಸ ಮಾಡಿದ್ದಾರೆ. ಈ ವರ್ಷ ಪ್ರಾರಂಭಗೊಂಡ `ಮಿ ವಾರ್ಡ್ ರೋಬ್ ಈಸ್ ಸು ವಾರ್ಡ್ ರೋಬ್’ ಸ್ಟೈಲ್ಕ್ರಾಕರ್ ನೈಟ್ ಮಾರ್ಕೆಟ್ ಅಭಿಯಾನದಲ್ಲಿ ಆಲಿಯಾ ಭಟ್ ತಮ್ಮ ವಿಶೇಷ ಉಡುಪೊಂದನ್ನು ಮಾರಾಟಕ್ಕೆ ಇಟ್ಟಿದ್ದರು. ಈ ಉಡುಪಿನ ಮಾರಾಟದಿಂದ ಬಂದ ಹಣವನ್ನು ಅವರು ಬೆಂಗಳೂರು ಮೂಲದ ಎಆರ್ ಓಎಚ್ಎ ಸಂಸ್ಥೆಯೊಂದು ಆಯೋಜಿಸಿದ್ದ `ಲಿಟರ್ ದ ಲೈಟರ್’ ಕಾರ್ಯಕ್ರಮದಲ್ಲಿ ತೊಡಗಿಸಿದ್ದಾರೆ.