ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಸಿದ್ದಾರ್ಥ್ ಶುಕ್ಲಾ
ಸಿದ್ದಾರ್ಥ್ ಶುಕ್ಲಾ
ಮುಂಬಯಿ:  ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಬೈನ ಒಶಿವಾರದ ಜಂಕ್ಷನ್‍ನ ಬಳಿ ಶನಿವಾರ ಅಪಘಾತ ಸಂಭವಿಸಿದೆ. ಬಿಎಂಡಬ್ಲ್ಯೂ ಕಾರನ್ನು ಸ್ವತಃ ಸಿದ್ದಾರ್ಥ್ ಅವರೇ ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. 
ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದಲೇ ಈ ಅವಘಡ ಸಂಭವಿಸಿದೆ ಅಂತ ಪೊಲೀಸರು ಸಿದ್ದಾರ್ಥ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ .

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com