ಆಂತರರಾಷ್ಚ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 2016ರಲ್ಲಿ ಜಲ ಸಂರಕ್ಷಣೆಗಾಗಿ ತಾವೇ ಸ್ಥಾಪಿಸಿದ್ದ 'ಪಾನಿ ಫೌಂಡೇಷನ್ ' ಮೂಲಕ ಈಗಾಗಲೇ ಹಿವಾರೆ ಬಜಾರ್, ರಾಳೇಗಣ ಸಿದ್ಧಿ, ಹಿವ್ರೆ ಸೇರಿದಂತೆ ಹಲವಾರು ಹಳ್ಳಿಗಳಲ್ಲಿನ ಬರ ನೀಗಿಸಿದ್ದಾರೆ ಆಮೀರ್. ಇದರಿಂದ ಮತ್ತಷ್ಟು ಸ್ಫೂರ್ತಿಗೊಂಡಿರುವ ಅವರು, ಪುಣೆ, ಮುಂಬಯಿ, ನಾಸಿಕ್, ನಾಗ್ಪುರ ಪ್ರಾಂತ್ಯಗಳಲ್ಲಿ ತಮ್ಮ ಫೌಂಡೇಷನ್ ಅಡಿ 'ಜಲ ಮಿತ್ರ' ಎಂಬ ವಿದ್ಯಾರ್ಥಿ ಸಂಘಟನೆ ರಚಿಸಿದ್ದಾರೆ.