ಕೃಷ್ಣಮೃಗ ಬೇಟೆ ಪ್ರಕರಣ: ಸೊನಾಲಿ, ಸೈಫ್, ಟಬುಗೆ ಹೆಚ್ಚಾದ ಸಂಕಷ್ಟ?

ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟಿಯರಾದ ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು ನಟ ಸೈಫ್ ಅಲಿಖಾನ್ ಹಾಗೂ ಇತರರನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ರಾಜಸ್ತಾನ ಸರ್ಕಾರ ಇಂದು ತಿಳಿಸಿದೆ.
ಸೈಫ್  ಆಲಿಖಾನ್ , ಸೊನಾಲಿ ಬೆಂದ್ರೆ
ಸೈಫ್ ಆಲಿಖಾನ್ , ಸೊನಾಲಿ ಬೆಂದ್ರೆ
Updated on

ಜೋಧ್ ಪುರ : ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ  ಬಾಲಿವುಡ್ ನಟಿಯರಾದ ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು  ನಟ ಸೈಫ್  ಅಲಿಖಾನ್ ಹಾಗೂ ಇತರರನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು  ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ರಾಜಸ್ತಾನ ಸರ್ಕಾರ ಇಂದು ತಿಳಿಸಿದೆ.

ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ಘೋಷಿಸಿ ಐದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು, ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬೂ, ನಟ ಸೈಫ್ ಅಲಿಖಾನ್  ನಿರ್ದೋಷಿ ಎಂದು ಐದು ತಿಂಗಳ ಹಿಂದೆ  ನ್ಯಾಯಾಲಯ ತೀರ್ಪು ನೀಡಿತ್ತು.

ಈಗ ಮತ್ತೆ  ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯಸರ್ಕಾರ ನಿರ್ಧರಿಸಿರುವುದರಿಂದ ಇವರಿಗೆ ಕಾನೂನು ಸಂಕಷ್ಟದ ಭೀತಿ ಎದುರಾಗಿದೆ.

1998ರಲ್ಲಿ ಹಮ್ ಸಾಥ್  ಸಾಥ್ ಹೈ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಜೋಧ್ ಪುರದಲ್ಲಿ ಎರಡು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ತಪಿತಸ್ಥ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಐದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿತ್ತು.

ಆದಾಗ್ಯೂ, ಸಾಕ್ಷ್ಯಧಾರಗಳ ಕೊರತೆಯಿಂದ ಸಹ ನಟರಾದ ಸೈಫ್ ಅಲಿಖಾನ್, ನೀಲಂ, ಟಬು ಸೊನಾಲಿ ಹಾಗೂ ಜೋಧ್ ಪುರ ನಿವಾಸಿ ದುಷ್ಯಂತ್ ಸಿಂಗ್ ಅವರನ್ನು ನಿರ್ದೋಷಿ ಎಂದು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿತ್ತು.

ವಿದೇಶ ಪ್ರವಾಸಕ್ಕೆ  ಅನುಮತಿಯಿಂದ ವಿನಾಯಿತಿ ನೀಡುವಂತೆ 52 ವರ್ಷದ ಸಲ್ಮಾನ್ ಖಾನ್ ಪರ ವಕೀಲರು  ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು . ಈ ಸಂಬಂಧ ಪ್ರತಿಕ್ರಿಯಿಸಿದ ನ್ಯಾಯಾಲಯ ಪ್ರತಿ ಬಾರಿ  ವಿದೇಶ ಭೇಟಿ ಸಂದರ್ಭದಲ್ಲಿ  ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವಂತೆ ಸಲ್ಮಾನ್ ಖಾನ್ ಗೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com