'ನನ್ನ ದುರಾದೃಷ್ಟ, ಈ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ'

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್
Updated on

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಾನು ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದೇನೆ. ಹೀಗಾಗಿ ನನಗೆ ಪ್ರಯಾಣಿಸಲು ಅನುಮತಿ ಇಲ್ಲ.  ಇದು ನನ್ನ ದುರಾದೃಷ್ಟ, ಆರೋಗ್ಯ ಹೀಗೆ ಇರುವುದರಿಂದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ನಾಳೆ ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದುರಾದೃಷ್ಟಕರ, ನನ್ನ ವಿಷಾದ ಇರಲಿ ಎಂದು ಬಿಗ್ ಬಿ ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ ಬಿಗ್ ಬಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಈ ವರ್ಷದ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ಪ್ರಶಸ್ತಿಗಳನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಪ್ರಶಸ್ತಿ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com