ಕಂಗನಾ ರಣಾವತ್ ಅಭಿನಯದ ಬಹುನಿರೀಕ್ಷಿತ ಮಣಿಕಾರ್ನಿಕಾ ಚಿತ್ರದ ಸಾಂಗ್ ಬಿಡುಗಡೆ ಕಾರ್ಯಕ್ರಮ ಮುಂಬೈಯಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆ ಕುರಿತಂತೆ ಮಾತನಾಡಿದ ರಣಾವತ್, ಇಂದಿನ ದಿನಗಳಲ್ಲಿ ರಾಷ್ಟ್ರೀಯತೆಯನ್ನು ಎದೆತಟ್ಟಿ ಹೇಳಿದರೆ, ಅವಮಾನವೆಂಬಂತೆ ಬಿಂಬಿಸಲಾಗುತ್ತದೆ ಎಂದು ಹೇಳಿದರು.
ಗೀತೆ ರಚನೆಕಾರ ಪ್ರಸೂನ್ ಜೋಶಿ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದನ್ನು ತಾವೂ ಒಪ್ಪಿಕೊಳ್ಳುವುದಾಗಿ ತಿಳಿಸಿದರು.