ಮುಂಬೈ: ಬಾಲಿವುಡ್ ಹಿರಿಯ ನಟ, ನಿರ್ದೇಶಕ ನಾಸೀರುದ್ದೀನ್ ಷಾ, ನಟಿ ದೀಪಿಕಾ ಪಡುಕೋಣೆ ಅವರ ಧೈರ್ಯವನ್ನು ಕೊಂಡಾಡಿದ್ದಾರೆ.
ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಾಸೀರುದ್ದೀನ್ ಹಲವು ವಿಷಯಗಳ ಕುರಿತು ಸಾಕಷ್ಟು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ, ದೆಹಲಿ ಜೆಎನ್ ಯು ವಿದ್ಯಾರ್ಥಿಗಳ ಬಗ್ಗೆಯೂ ಸಾಕಷ್ಟು ಮಾತನಾಡಿದ್ದಾರೆ. ಆದೇ ರೀತಿ ಜೆಎನ್ಯುಗೆ ಭೇಟಿ ನೀಡಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ ದೀಪಿಕಾ ಪಡುಕೋಣೆ ಅವರನ್ನು ಅಭಿನಂದಿಸಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾತ್ಮಕ ದಾಳಿಯ ನಂತರ ದೀಪಿಕಾ ಪಡುಕೋಣೆ ಅಲ್ಲಿಗೆ ತೆರಳಿ ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿಮಾಡಿದ್ದರು. ಅದೊಂದು ಅಸಾಧಾರಣ ಧೈರ್ಯದ ಕ್ರಮ ಎಂದು ನಾಸೀರುದ್ದೀನ್ ಷಾ, ಬಣ್ಣಿಸಿದ್ದಾರೆ. ಜೆಎನ್ಯು ಭೇಟಿಯ ನಂತರ ದೀಪಿಕಾ ಪಡುಕೋಣೆ ಅವರ ಜನಪ್ರಿಯತೆಯೇನು ಕಡಿಮೆಯಾಗಿಲ್ಲ ಎಂದು ಶಾ ತಿಳಿಸಿದ್ದಾರೆ.
Advertisement