ನಿರ್ಭಯಾ ಅಪರಾಧಿಗಳ ಜೊತೆ ಇಂದಿರಾ ಜೈಸಿಂಗ್ ರನ್ನು ಜೈಲಿನಲ್ಲಿರಿಸಬೇಕು: ಕಂಗನಾ ರಣಾವತ್ 

ನಿರ್ಭಯಾ ಅತ್ಯಾಚಾರಿಗಳನ್ನು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 
ಕಂಗನಾ ರಣಾವತ್ -ಇಂದಿರಾ ಜೈಸಿಂಗ್
ಕಂಗನಾ ರಣಾವತ್ -ಇಂದಿರಾ ಜೈಸಿಂಗ್
Updated on

ನವದೆಹಲಿ: ನಿರ್ಭಯಾ ಅತ್ಯಾಚಾರಿಗಳನ್ನು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 


ತಮ್ಮ ಪಂಗಾ ಚಿತ್ರದ ಪ್ರಚಾರ ಸಂದರ್ಭದಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಭಯಾ ಅಪರಾಧಿಗಳ ಜೊತೆಗೆ ಆ ಹೆಂಗಸು ಇಂದಿರಾ ಜೈಸಿಂಗ್ ರನ್ನು ನಾಲ್ಕು ದಿವಸ ಜೈಲಿನಲ್ಲಿರಿಸಬೇಕು. ಅಂತಹ ಮಹಿಳೆಯರೇ ಇಂತಹ ರಾಕ್ಷಸಪ್ರವೃತ್ತಿಯ ಕೊಲೆಗಾರ ಮಕ್ಕಳಿಗೆ ಜನ್ಮ ನೀಡುವುದು ಎಂದು ಆಕ್ರೋಶ ಹೊರಹಾಕಿದರು.


ಇಂದಿರಾ ಜೈಸಿಂಗ್ ಯಾವತ್ತೂ ಕೂಡ ನಿರ್ಭಯಾ ಪೋಷಕರನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿಲ್ಲ. ಇಂದು ಅಪರಾಧಿಗಳ ಪರ ವಹಿಸಿ ಮಾತನಾಡುತ್ತಿದ್ದಾರೆ. ಅತ್ಯಾಚಾರಿಗಳನ್ನು ಬೆಂಬಲಿಸಿ ತಮ್ಮ ಕೆಲಸ ಮಾಡಿಸಿಕೊಳ್ಳುವ ಇಂತವರಿಂದಲೇ ಅಪರಾಧಿಗಳಿಗೆ ಶಿಕ್ಷೆಯಾಗಿ ಅಮಾಯಕರಿಗೆ ನ್ಯಾಯ ಸಿಗಲು ಈ ದೇಶದಲ್ಲಿ ವಿಳಂಬವಾಗುತ್ತಿದೆ ಎಂದು ಕಂಗನಾ ರಣಾವತ್ ನೊಂದು ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com