ಉದ್ಧವ್ ಠಾಕ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಂಗಾನಾ ವಿರುದ್ಧ ದೂರು ಕೇಸ್ ದಾಖಲು

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ನಡುವಿನ ಮಾತಿನ ಸಮರ ತೀವ್ರಗೊಂಡಿದೆ.
ಕಂಗನಾ ರಣಾವತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಕಂಗನಾ ರಣಾವತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ರಣವಾತ್  ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಗುರುವಾರ ಶಿವಸೇನೆ ಹಾಗೂ ಬೃಹನ್  ಮುಂಬೈ ಪಾಲಿಕೆ ವಿರುದ್ಧ ಕಿಡಿಕಾರಿರುವ ಕಂಗನಾ ರಣವಾತ್, ಅಧಿಕಾರಕ್ಕಾಗಿ ತತ್ವ ಸಿದ್ದಾಂತಗಳನ್ನು ಮಾರಿಕೊಳ್ಳಲು ಸಿದ್ಧವಾಗಿರುವ ಶಿವಸೇನೆ 'ಸೋನಿಯಾ ಸೇನೆ'ಯಾಗಿದ್ದೆ ಎಂದು ಟೀಕಿಸಿದ್ದಾರೆ.

ಅಲ್ಲದೇ, ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಅವಹೇನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ವಿಕ್ರೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ ಕಂಗನಾ ರಣವಾತ್ ಅವರ ಬಾಂದ್ರಾದಲ್ಲಿರುವ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com