ಬಾಲಿವುಡ್ ನಟಿ ಕಂಗನಾ ರಣಾವತ್ ಕಾಲೆಳೆದು ಟ್ರೋಲ್ ಗೆ ಗುರಿಯಾದ ನಟ ಪ್ರಕಾಶ್ ರಾಜ್!

ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ಕೆಲ ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಹಾಗೂ ಕಂಗನಾ ನಡುವೆ ವಾಕ್ ಸಮರ ಶುರುವಾಗಿದೆ. ಇದರ ಮಧ್ಯೆ ನಟ ಪ್ರಕಾಶ್ ರೈ ಟ್ವೀಟ್ ಮೂಲಕ ನಟಿಯ ಕಾಲೆಳೆದಿದ್ದಾರೆ.
ಪ್ರಕಾಶ್ ರಾಜ್-ಕಂಗನಾ
ಪ್ರಕಾಶ್ ರಾಜ್-ಕಂಗನಾ
Updated on

ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ಕೆಲ ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಹಾಗೂ ಕಂಗನಾ ನಡುವೆ ವಾಕ್ ಸಮರ ಶುರುವಾಗಿದೆ. ಇದರ ಮಧ್ಯೆ ನಟ ಪ್ರಕಾಶ್ ರೈ ಟ್ವೀಟ್ ಮೂಲಕ ನಟಿಯ ಕಾಲೆಳೆದಿದ್ದಾರೆ. 

ಕಂಗನಾ ರಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಅಭಿನಯಿಸಿದ್ದು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಅವರು ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಆಗಿಬಿಟ್ಟಿದ್ದಾರೆ ಎಂದು ಮೀಮ್ ಅನ್ನು ಟ್ವೀಟ್ ಮಾಡಿದ್ದರು.

ಜಸ್ಟ್ ಆ್ಯಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿದ್ದು ಇದಕ್ಕೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸಿಕ್ಕಿವೆ. 

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಬಾಲಿವುಡ್ ನಲ್ಲಿ ನೆಪೋಟಿಸಂ ಇದೆ ಎಂದು ಕಂಗನಾ ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com