ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ಒಂದು ಕೋಟಿ ರೂ. ನೀಡಿದ ನಟ ಅಕ್ಷಯ್ ಕುಮಾರ್

ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಒಂದು ಕೋಟಿ ರೂಪಾಯಿ ನೀಡಿದ್ದಾರೆ.
ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್

ನವದೆಹಲಿ: ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಒಂದು ಕೋಟಿ ರೂಪಾಯಿ ನೀಡಿದ್ದಾರೆ.

ಅಕ್ಷಯ್ ಕುಮಾರ್ ಯಾವಾಗಲೂ ಜನರಿಗೆ ಸಹಾಯ ಮಾಡಲು ಮುಂದಿರುತ್ತರೆ. ಕೊರೊನಾದಂತಹ ಸಂಕಟದ ಸಮಯದಲ್ಲಿ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಅಕ್ಷಯ್ ಪ್ರಧಾನಿ ಕೇರ್ಸ್ ನಿಧಿಗೆ ಸಾಕಷ್ಟು ಹಣವನ್ನು ನೀಡಿದ್ದರು. ಇದಲ್ಲದೆ, ಅವರು ಕೊರೊನಾ ವಾರಿಯರ್ಸ್‌ಗೆ ಸಹ ಸಹಾಯ ಮಾಡಿದ್ದಾರೆ.

ಸಂಕಷ್ಟ ಸಮಯದಲ್ಲಿ ಸಹಾಯ ಹಸ್ತ ಚಾಚಿರುವ ನಟ ಅಕ್ಷಯ್ ಕುಮಾರ್ ಅವರಿಗೆ ಅಸ್ಸಾಂ ಸಿಎಂ ಸರ್ಬಾನಂದ ಸೊನೊವಾಲ್ ಕೃತಜ್ಞತೆ ಸಲ್ಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com