ಮುಂಬೈ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಭಾರತ ಬಂದ್ ಗೆ ಕರೆ ನೀಡಲಾಗಿದ್ದು ವ್ಯಾಪಕ ಬೆಂಬಲ ಸಿಕ್ಕಿದೆ. ಇದೀಗ ಬಾಲಿವುಡ್ ಸೆಲೆಬ್ರಿಟಿಗಳು ಭಾರತ್ ಬಂದ್ಗೆ ಬೆಂಬಲ ನೀಡಿದ್ದಾರೆ.
ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ತಮ್ಮ ಆಂದೋಲನವನ್ನು ತೀವ್ರಗೊಳಿಸುವುದಾಗಿ ಮತ್ತು ರಾಷ್ಟ್ರ ರಾಜಧಾನಿಗೆ ಹೋಗುವ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸುವುದಾಗಿ ರೈತರು ಮಂಗಳವಾರ 'ಭಾರತ್ ಬಂಧ'ಕ್ಕೆ ಕರೆ ನೀಡಿದ್ದರು.
ನಾಳೆ ನಡೆಯಲಿರುವ ಭಾರತ್ ಬಂದ್ ಗೆ ಖ್ಯಾತನಾಮರಾದ ದಿಲ್ಜಿತ್ ದೋಸಾಂಜ್, ಹರ್ಭಜನ್ ಮನ್, ಜಸ್ಬೀರ್ ಜಾಸ್ಸಿ, ರೀತೇಶ್ ದೇಶ್ಮುಖ್, ನಿರ್ದೇಶಕ ಹನ್ಸಾಲ್ ಮೆಹ್ತಾ ಅವರು ಇತರರು ಈಗಾಗಲೇ ರೈತರಿಗೆ ಬೆಂಬಲ ಘೋಷಿಸಿದ್ದರು. ಇದೀಗ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಸೋನಮ್ ಕಪೂರ್ ಬೆಂಬಲ ನೀಡಿದ್ದಾರೆ.
ನಟ ಸೋನಮ್ ಕಪೂರ್ ರೈತರನ್ನು 'ಮಾನವ ನಾಗರಿಕತೆಯ ಸ್ಥಾಪಕರು' ಎಂದು ಟ್ವೀಟ್ ಮಾಡಿದ್ದಾರೆ.
Advertisement