ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ಮತ್ತು ಸಹೋದರಿಗೆ ಸಮನ್ಸ್

ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 
ಕಂಗನಾ ರಣಾವತ್
ಕಂಗನಾ ರಣಾವತ್

ನವದೆಹಲಿ: ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ವಿಜಯದಶಮಿ ಹಬ್ಬದ ದಿನವಾದ ಅ.26 ಮತ್ತು 27ರಂದು ಅವರು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ತಮ್ಮ ಟ್ವೀಟ್​ಗಳ ಮೂಲಕ ಕೋಮು ದ್ವೇಷವನ್ನು ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ​ ದೂರಿನ ಕುರಿತು ದಾಖಲಾದ ಎಫ್​ಐಆರ್​ ಅಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು.

ನಟಿ ಕಂಗನಾ ಮತ್ತವರ ಸಹೋದರಿ ಟ್ವೀಟ್​ ಮೂಲಕ ಕೋಮುದ್ವೇಷ ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಸಾಹಿಲ್​ ಆಸ್ರಫ್​ಆಲಿ ಸಯ್ಯದ್​ ಬಾಂದ್ರಾ ಮೆಟ್ರೋಪಾಲಿಟನ್​ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಈ ಕ್ರಮಕ್ಕೆ ಮುಂದಾಗಲಾಗಿದೆ.

ಕಂಗಾನಾ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆ. ಇದು ಧಾರ್ಮಿಕ ಮನೋಭಾವಕ್ಕೆ ಧಕ್ಕೆ ತರುವಂತೆ ಇದೆ. ಅಷ್ಟೇ ಅಲ್ಲದೇ , ಅನೇಕ ಕಲಾವಿದರ ಭಾವನೆಗಳು ಚ್ಯುತಿ ತರುತ್ತಿದೆ. ಕಂಗನಾ ಕಲಾವಿದರನ್ನು ಕೋಮು ವರ್ಗದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಯ್ಯದ್​ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com