ದೇಶಪ್ರೇಮಿಗಳನ್ನು ಯಾರೂ ಬಗ್ಗುಬಡಿಯಲು ಸಾಧ್ಯವಿಲ್ಲ: ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ್ದು, ಗೃಹ ಸಚಿವ ಅಮಿತ್ ಶಾ ಗೆ ಧನ್ಯವಾದ ತಿಳಿಸಿದ್ದಾರೆ. 
ಕಂಗನಾ ರನೌತ್
ಕಂಗನಾ ರನೌತ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ್ದು, ಗೃಹ ಸಚಿವ ಅಮಿತ್ ಶಾ ಗೆ ಧನ್ಯವಾದ ತಿಳಿಸಿದ್ದಾರೆ. 

ಸುಶಾಂತ್ ಸಿಂಗ್ ರಜ್ಪೂತ್ ಅವರ ಸಾವಿನ ನಂತರ ನಟಿ ಕಂಗನಾ ಬಾಲಿವುಡ್ ನಲ್ಲಿ ಡ್ರಗ್ ಸಮಸ್ಯೆ ಬಗ್ಗೆ ಮಾತನಾಡಿದ್ದರು,  ಈ ಬಳಿಕ ಅವರಿಗೆ ಬೆದರಿಕೆ ಬಂದಿದ್ದ ಹಿನ್ನೆಲೆಯಲ್ಲಿ ವೈ+ ಶ್ರೇಣಿಯ ಭದ್ರತೆ ಒದಗಿಸಲಾಗಿತ್ತು. 

ಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ, ದೇಶಪ್ರೇಮಿಗಳನ್ನು ಯಾರೂ ಬಗ್ಗುಬಡಿಯಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಶಿವಸೇನೆ ಸಂಸದ ಸಂಜಯ್ ರೌತ್ ಅವರೊಂದಿಗೆ ವಾಗ್ವಾದದ ನಡುವೆಯೇ ಕಂಗನಾಗೆ ಭದ್ರತೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com