ಸಲ್ಮಾನ್ ಖಾನ್
ಬಾಲಿವುಡ್
ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಸಲ್ಮಾನ್ ಖಾನ್
ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮುಂಬೈ: ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳೆದ ತಿಂಗಳು ಮುಂಬೈನ ಬಾಂದ್ರಾ ಬ್ಯಾಂಡ್ಸ್ಟ್ಯಾಂಡ್ ವಾಯುವಿಹಾರದಲ್ಲಿ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರನ್ನು ಉದ್ದೇಶಿಸಿ ಜೀವ ಬೆದರಿಕೆ ಪತ್ರ ಬಂದ ನಂತರ ಈ ಬೆಳವಣಿಗೆ ನಡೆದಿದೆ.
ತನಗೆ ಮತ್ತು ತಮ್ಮ ತಂದೆಗೆ ಜೀವ ಬೆದರಿಕೆ ಪತ್ರ ಬಂದ ನಿಮಿತ್ತ ಸಲ್ಮಾನ್ ಖಾನ್ ಅವರು ಜುಲೈ 22 ರಂದು ಶುಕ್ರವಾರ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ನಿಮ್ಮ ಜೀವನವು ಪಂಜಾಬಿ ಗಾಯ ಸಿಧು ಮೂಸೆವಾಲಾ ಅವರ ರೀತಿಯಲ್ಲೇ ಕೊನೆಗೊಳ್ಳುವುದು ಎಂದು ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ