ಮುಂಬೈ: ಹೈದ್ರಾಬಾದ್ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಆಕ್ಷನ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾಗ ಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿಷಯವನ್ನು ಸ್ವತಃ ಬಚ್ಚನ್ ಅವರೇ ತಮ್ಮ ಬ್ಲಾಗ್ನಲ್ಲಿ ಭಾನುವಾರ ಬರೆದುಕೊಂಡಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ವಿಶ್ರಾಂತಿ ಪಡೆಯುತ್ತಿರುವುದರಿಂದ ಅಭಿಮಾನಿಗಳು ನಮ್ಮ ಮನೆ ಬಳಿಗೆ ಬರದೆ ಸಹಕರಿಸಬೇಕು ಎಂದು ಬಿಗ್ಬಿ ಮನವಿ ಮಾಡಿಕೊಂಡಿದ್ದರು.
ಹೈದ್ರಾಬಾದ್ ಮೂಲದ ಆಸ್ಪತ್ರೆಯೊಂದರಲ್ಲಿ ಸಿಟಿ ಸ್ಕ್ಯಾನ್ ಗೆ ಒಳಗಾದ ನಂತರ ವಿಶ್ರಾಂತಿ ಪಡೆಯುವಂತೆ ವೈದ್ಯರು ಅಮಿತಾಬ್ ಬಚ್ಚನ್ ಅವರಿಗೆ ಸಲಹೆ ನೀಡ್ದ್ದು, ಮುಂಬೈನಲ್ಲಿರುವ ತಮ್ಮ ಜಲ್ಸಾ ನಿವಾಸದಲ್ಲಿ ಅಮಿತಾಬ್ ಬಚ್ಚನ್ ವಿಶ್ರಾಂತಿ ಪಡೆಯುತ್ತಿದ್ದಾರೆ.
Advertisement