ಕರಣ್ ಜೋಹರ್ ಕಾರಣಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗಿದ್ದು?: ನಟಿ ಕಂಗನಾ ರಣಾವತ್

ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ದೇಸಿ ಹುಡುಗಿ ಹಾಲಿವುಡ್ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. 
ಪ್ರಿಯಾಂಕಾ-ಕರಣ್ ಜೋಹಾರ್-ಕಂಗನಾ
ಪ್ರಿಯಾಂಕಾ-ಕರಣ್ ಜೋಹಾರ್-ಕಂಗನಾ

ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ದೇಸಿ ಹುಡುಗಿ ಹಾಲಿವುಡ್ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. 

ಪ್ರಿಯಾಂಕಾ ಈಗ ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ. ಬಾಲಿವುಡ್‌ನಲ್ಲಿ ಮೂಲೆಗುಂಪಾಗಿದ್ದರಿಂದ ಹಾಲಿವುಡ್‌ಗೆ ಹೋದೆ ಎಂದು ನಟಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದರು. ಇದೀಗ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಗ್ಗೆ ದೊಡ್ಡ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಕಂಗನಾ ಪ್ರಕಾರ, ಪ್ರಿಯಾಂಕಾ ಅವರನ್ನು ಬಾಲಿವುಡ್‌ನಲ್ಲಿ ಕರಣ್ ಜೋಹರ್ ನಿಷೇಧಿಸಿದರು. ಈ ಕಾರಣಕ್ಕಾಗಿಯೇ ಪ್ರಿಯಾಂಕಾ ಹಾಲಿವುಡ್ ಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕಂಗನಾ ರಣಾವತ್ ಅವರ ಇತ್ತೀಚಿನ ಟ್ವೀಟ್ ವೈರಲ್
ಕಂಗನಾ ಟ್ವೀಟ್‌ನಲ್ಲಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಬಾಲಿವುಡ್ ನಲ್ಲಿ ಗುಂಪುಗೂಡಿದರು. ಅಲ್ಲದೆ ಆಕೆಯನ್ನು ಬೆದರಿಸಿ ಚಿತ್ರರಂಗದಿಂದ ಹೊರಹಾಕಲಾಯಿತು. ಸಾಕಷ್ಟು ಏಳು ಬೀಳುಗಳನ್ನು ನೋಡಿ ತನ್ನನ್ನು ತಾನು ಚಿತ್ರರಂಗದಲ್ಲಿ ಸ್ಥಾಪಿಸಿಕೊಂಡಿದ್ದ ಮಹಿಳೆ ಭಾರತ ತೊರೆಯಬೇಕಾಯಿತು. ಕರಣ್ ಜೋಹರ್ ಅವರನ್ನು ಬ್ಯಾನ್ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ ಎಂದರು. 

ಕರಣ್ ಜೋಹರ್ ಬಗ್ಗೆ ಕಂಗನಾ ಹೇಳಿದ್ದು ಹೀಗೆ
ಮುಂದಿನ ಟ್ವೀಟ್‌ನಲ್ಲಿ, ಶಾರುಖ್ ಅವರೊಂದಿಗಿನ ಸ್ನೇಹದಿಂದಾಗಿ ಕರಣ್ ಜೋಹರ್ ಅವರೊಂದಿಗೆ ಪ್ರಿಯಾಂಕಾ ಹೋರಾಟ ನಡೆಸಬೇಕಾದದ್ದನ್ನು ಮಾಧ್ಯಮಗಳು ಬರೆದಿದ್ದವು. ಪ್ರಿಯಾಂಕಾಗೆ ಭಾರತವನ್ನು ತೊರೆಯಬೇಕಾದಷ್ಟು ಕಿರುಕುಳ ನೀಡಿದರು ಎಂದು ಬರೆದಿದ್ದಾರೆ. ಇನ್ನು ಮತ್ತೊಂದು ಟ್ವೀಟ್ ನಲ್ಲಿ ಜುಗುಪ್ಸೆ, ಅಸೂಯೆ, ನೀಚ ಮತ್ತು ವಿಷಕಾರಿ ವ್ಯಕ್ತಿ ಚಿತ್ರರಂಗದ ಸಂಸ್ಕೃತಿ ಮತ್ತು ಪರಿಸರವನ್ನು ಹಾಳುಮಾಡಿದ್ದಾರೆ. ಶಾರುಖ್ ಖಾನ್ ದಿನಗಳಲ್ಲಿ ಹೊರಗಿನವರಿಗೆ ಎಂದಿಗೂ ಪ್ರತಿಕೂಲವಾಗಿರಲಿಲ್ಲ ಎಂದು ಟ್ವೀಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com