ಜೀವ ಬೆದರಿಕೆ: ಬಾಲಿವುಡ್ ನಟ ಶಾರೂಕ್ ಖಾನ್ ಗೆ Y+ ಭದ್ರತೆ

'ಪಠಾಣ್' ಮತ್ತು 'ಜವಾನ್' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರಿಗೆ ವೈ+ ಭದ್ರತೆಯನ್ನು ಒದಗಿಸಿದ್ದಾರೆ.
ಶಾರೂಕ್ ಖಾನ್
ಶಾರೂಕ್ ಖಾನ್
Updated on

ಮುಂಬೈ: 'ಪಠಾಣ್' ಮತ್ತು 'ಜವಾನ್' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರಿಗೆ ವೈ+ ಭದ್ರತೆಯನ್ನು ಒದಗಿಸಿದ್ದಾರೆ.

Y+ ಭದ್ರತೆ ಅಡಿಯಲ್ಲಿ, ಶಾರೂಕ್ ಖಾನ್ ಅವರಿಗೆ ದಿನಪೂರ್ತಿ 24 ಗಂಟೆಗಳ ಕಾಲ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯಿರುತ್ತಾರೆ. ಇದಕ್ಕೂ ಮುನ್ನ ಶಾರೂಕ್ ಖಾನ್ ಇಬ್ಬರು ಭದ್ರತಾ ಸಿಬ್ಬಂದಿಯ ರಕ್ಷಣೆಯಲ್ಲಿದ್ದರು. 

ಶಾರೂಕ್ ಖಾನ್ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ತಮ್ಮ ಚಿತ್ರ ಯಶಸ್ವಿಯಾದ ನಂತರ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಶಾರೂಕ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. 

ಈ ಹಿಂದೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆಯ ನಂತರ ಕಳೆದ ವರ್ಷ ನಟ ಸಲ್ಮಾನ್ ಖಾನ್‌ಗೆ Y+ ಭದ್ರತೆಯನ್ನು ಒದಗಿಸಲಾಗಿತ್ತು. 

ಮಹಾರಾಷ್ಟ್ರ ಸರ್ಕಾರದ ನೀತಿಯ ಪ್ರಕಾರ, ಜೀವ ಬೆದರಿಕೆಯನ್ನು ಎದುರಿಸುತ್ತಿರುವ ನಾಗರಿಕರಿಗೆ ಭದ್ರತೆಯನ್ನು ಒದಗಿಸಲಾಗಿದೆ. ಸರ್ಕಾರ ಒದಗಿಸುವ ರಕ್ಷಣೆಗೆ ಭದ್ರತೆ ಪಡೆದವರು ಶುಲ್ಕವನ್ನು ಪಾವತಿಸಬೇಕು ಮತ್ತು ಭದ್ರತಾ ಮೊತ್ತವನ್ನು ಠೇವಣಿ ಮಾಡಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com